ಬೆಳಗಾವಿ : ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಹಲವರು ಬಲಿಯಾಗಿದ್ದಾರೆ. ಇದೀಗ ಬೆಳಗಾವಿಯಲ್ಲಿ ದಾರುಣ ಘಟನೆ ಒಂದು ನಡೆದಿದ್ದು, ಹಳ್ಳದಲ್ಲಿ ಎತ್ತಿನಗಾಡಿ ಮಗುಚಿ ಬಿದ್ದು ಇಬ್ಬರು ಬಾಲಕರು ಸೇರಿ ಒಂದು ಎತ್ತು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ನಡೆದಿದೆ.
ಅಥಣಿ ತಾಲ್ಲೂಕಿನ ಸಂಬರಗಿ ಗ್ರಾಮದಲ್ಲಿ ನಿನ್ನೆ ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದ ಅಗ್ರಾಣಿ ಹಳ್ಳವನ್ನು ಎತ್ತಿನ ಬಂಡಿಯಲ್ಲಿ ದಾಟುವಾಗ, ನಾಗನೂರ ಪಿಎ ಗ್ರಾಮದ ಸಹೋದರರಾದ ದೀಪಕ ಕಾಂಬಳೆ (9), ಗಣೇಶ ಕಾಂಬಳೆ (7) ಮತ್ತು ಒಂದು ಎತ್ತು ಸಾವನ್ನಪ್ಪಿದೆ.
ನಿರಂತರ ಮಳೆಯಿಂದಾಗಿ ಹಳ್ಳ ಸಂಪೂರ್ಣವಾಗಿ ತುಂಬಿ ಹರಿಯುತ್ತಿತ್ತು. ಈ ವೇಳೆ ಎತ್ತಿನ ಬಂಡಿಯಲ್ಲಿ ಬರುತ್ತಿದ್ದ ಇಬ್ಬರು ಬಾಲಕರಿ ದಾರಿ ಕಾಣಿಸಿಲ್ಲ. ತಕ್ಷಣ ಎತ್ತಿನಬಂಡಿ ಮುಗುಚಿ ಬಿದ್ದಿದೆ.ಹಳ್ಳಕ್ಕೆ ಸೇತುವೆ ಇಲ್ಲದಿರುವುದರಿಂದ ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.