Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭೂಕಂಪ: ಪಾಕ್ ಜೈಲಿನಿಂದ ಡಜನ್ಗಟ್ಟಲೆ ಕೈದಿಗಳು ಪರಾರಿ

03/06/2025 11:44 AM

ಗಾಝಾದಲ್ಲಿ ಇಸ್ರೇಲಿ ಗುಂಡಿನ ದಾಳಿಗೆ ಕನಿಷ್ಠ 20 ಫೆಲೆಸ್ತೀನೀಯರು ಬಲಿ | Israel-Hamas war

03/06/2025 11:41 AM

ಇಂದು `ವಿಶ್ವ ಬೈಸಿಕಲ್ ದಿನ 2025’: ಈ ದಿನದ ಇತಿಹಾಸ, ಥೀಮ್, ಮಹತ್ವ ತಿಳಿಯಿರಿ | World Bicycle Day 2025

03/06/2025 11:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ವಿವಿಧ ಇಲಾಖೆಗಳ `ಪ್ರಗತಿ ಪರಿಶೀಲನೆ’ : ಹೀಗಿದೆ CM ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು.!
KARNATAKA

BIG NEWS : ರಾಜ್ಯದ ವಿವಿಧ ಇಲಾಖೆಗಳ `ಪ್ರಗತಿ ಪರಿಶೀಲನೆ’ : ಹೀಗಿದೆ CM ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು.!

By kannadanewsnow5731/05/2025 8:11 AM

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಸತತ 9 ಗಂಟೆಗಳ ಕಾಲ ಸುಧೀರ್ಘ ಸಭೆ ನಡೆಸಿದ್ದಾರೆ.

ಹೀಗಿದೆ ಸಿಎಂ ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು

ಎಲ್ಲಾ ತಾಲೂಕುಗಳಲ್ಲಿ ಡಯಾಲಿಸಿಸ್ ಯುನಿಟ್ ಪ್ರಾರಂಭಿಸಲು ಈಗಾಗಲೇ ಆದೇಶ ನೀಡಲಾಗಿದೆ. ಇವು ಪ್ರಾರಂಭವಾಗಿದೆಯೇ? ಪ್ರಾರಂಭವಾಗಿದ್ದರೆ ಕಾರ್ಯನಿರ್ವಹಿಸುತ್ತಿವೆಯೇ? ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ಖಾತ್ರಿಪಡಿಸುವುದು ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿಯಾಗಿದೆ.

ಜಿಲ್ಲಾಸ್ಪತ್ರೆ, ತಾಲೂಕಾಸ್ಪತ್ರೆಗಳಿಗೆ ನೀವು ನಿರಂತರವಾಗಿ ಭೇಟಿ ನೀಡಬೇಕು. ಜಿಲ್ಲಾ ಮಟ್ಟದಲ್ಲಿ ವೈದ್ಯಾಧಿಕಾರಿಗಳನ್ನು ಅನಗತ್ಯವಾಗಿ ಸಭೆಗಳಿಗೆ ಆಹ್ವಾನಿಸಬಾರದು.

ಬಾಣಂತಿಯರ ಮರಣ ಪ್ರಮಾಣ ಕೇರಳಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹೆಚ್ಚಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.30 ರಷ್ಟು ಕಡಿಮೆಯಾಗಿದ್ದರೂ, ಇದನ್ನು ಇನ್ನಷ್ಟು ಕಡಿಮೆಗೊಳಿಸಲು ಸಾಂಸ್ಥಿಕ ಹೆರಿಗೆಯನ್ನು ಹೆಚ್ಚಿಸುವುದು, ಅಗತ್ಯ ಉಪಕರಣಗಳ ಖರೀದಿ ಸೇರಿದಂತೆ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

ಸ್ಮಶಾನ ಮತ್ತು ಕಬರಸ್ತಾನಗಳಿಗೆ ಜಮೀನು ಒದಗಿಸಲು ಆದ್ಯತೆ ನೀಡಬೇಕು. ಸರ್ಕಾರಿ ಜಮೀನು ಲಭ್ಯವಿಲ್ಲದ ಕಡೆ ಖಾಸಗಿ ಜಮೀನು ಖರೀದಿ ಮಾಡಿ ಒದಗಿಸಬೇಕು.

ಹಾಸ್ಟೆಲ್‌ಗಳಿಗೆ ನಿವೇಶನ ಗುರುತಿಸುವ ಸಂದರ್ಭದಲ್ಲಿ ಊರಿನಿಂದ ಬಹಳ ದೂರವಿರುವ ನಿರ್ಜನ ಪ್ರದೇಶದಲ್ಲಿ ನೀಡಬಾರದು. ನಿವೃತ್ತ ಸೈನಿಕರಿಗೆ ನಿವೇಶನ ಕುರಿತಾದ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಿ ಅವರಿಗೆ ಜಮೀನು ಒದಗಿಸಬೇಕು. ಪ್ರತಿ ತಾಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನ ಸಂಪೂರ್ಣ ಮಾಹಿತಿ ಲಭ್ಯವಿದ್ದು, ಒತ್ತುವರಿಯಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸಬೇಕು.

ಮುಂದಿನ ಸಭೆಯ ವೇಳೆ ನಿವೇಶನ ಲಭ್ಯವಿಲ್ಲದ ಬಗ್ಗೆ ಯಾವುದೇ ದೂರು ಬರಬಾರದು.

ಸೈನಿಕರ ಕಲ್ಯಾಣ ನಿಗಮ ಸ್ಥಾಪಿಸುವ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಒಟ್ಟು 59 ತಾಲೂಕುಗಳಲ್ಲಿ ಕ್ರೀಡಾಂಗಣಗಳು ಲಭ್ಯವಿಲ್ಲ. ಎಲ್ಲಾ ತಾಲೂಕುಗಳಲ್ಲಿ ಕ್ರೀಡಾ೦ಗಣ ನಿರ್ಮಾಣಕ್ಕೆ ಜಮೀನು ಗುರುತಿಸಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು.

ಯುವನಿಧಿ ಯೋಜನೆಯಡಿ ಪ್ರತಿ ಫಲಾನುಭವಿಗೆ ಎರಡು ವರ್ಷಗಳ ಅವಧಿಗೆ ನೆರವು ನೀಡಲಾಗುತ್ತಿದ್ದು, ಈ ಅವಧಿಯಲ್ಲಿ ಫಲಾನುಭವಿಗಳಿಗೆ ಉದ್ಯೋಗ ದೊರೆತರೆ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಿದರೆ ನೆರವು ಸ್ಥಗಿತಗೊಳ್ಳುತ್ತದೆ. ಪ್ರತಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರ ಬೆಳವಣಿಗೆ ಮೇಲೆ ನಿಗಾ ವಹಿಸಬೇಕು.

ಗ್ರಾಮೀಣ ಪ್ರದೇಶದಲ್ಲಿ 1.50 ಕೋಟಿ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಬಾಕಿಯಿರುವ 1,352 ಇ-ಸ್ವತ್ತು ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಬೇಕು.

ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್‌ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾತ್ರ ಪ್ರಾರಂಭವಾಗಿದೆ. ಒಂದು ವಾರದ ಒಳಗಾಗಿ ಇನ್ನುಳಿದ ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇನ್ನೂ 5 ಕಡೆ ಇಂದಿರಾ ಕ್ಯಾಂಟೀನ್‌ಗಳಿಗೆ ಸ್ಥಳ ಗುರುತಿಸಬೇಕಾಗಿದೆ. ತಕ್ಷಣ ನಿವೇಶನ ಗುರುತಿಸಬೇಕು.

ನಗರಾಭಿವೃದ್ಧಿ ಇಲಾಖೆಯಡಿ ಒಟ್ಟು 46,85,107 ಎ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, 21,18,459 ಸ್ವತ್ತುಗಳಿಗೆ ಇ-ಖಾತಾ ನೀಡಲಾಗಿದೆ. 9,93,342 ಅನಧಿಕೃತ ಬಿ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, ಇದುವರೆಗೆ 2,21,691 ಬಿ-ಖಾತಾ ನೀಡಲಾಗಿದೆ. ಎಲ್ಲಾ ಸ್ವತ್ತುಗಳಿಗೆ ನಿಯಮಾನುಸಾರ ಖಾತಾ ಒದಗಿಸಿ ತೆರಿಗೆ ವ್ಯಾಪ್ತಿಗೆ ಬರಲು ಕ್ರಮ ಕೈಗೊಳ್ಳಬೇಕು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಘಿ ಪ್ರಮಾಣ ನಿಯಂತ್ರಣದಲ್ಲಿದೆ. ಆದರೂ ಡೆಂಘಿ ನಿಯಂತ್ರಣಕ್ಕೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಕೊರೊನಾ ಬಗ್ಗೆ ಯಾವುದೇ ಆತಂಕ ಅಗತ್ಯವಿಲ್ಲ. ಆದರೆ ಎಚ್ಚರಿಕೆ ಅಗತ್ಯ.

BIG NEWS: `Progress review' of various departments of the state: These are the highlights of CM Siddaramaiah's meeting!
Share. Facebook Twitter LinkedIn WhatsApp Email

Related Posts

BREAKING : ಇಂದು 18ನೇ ಆವೃತ್ತಿಯ `IPL’ ಫೈನಲ್ : ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ‘RCB’ ಯಿಂದ ವೀಡಿಯೋ ರಿಲೀಸ್ | WATCH VIDEO

03/06/2025 11:23 AM1 Min Read

ಈ ಸಲ ಕಪ್ ನಮ್ದೇ : `RCB’ ಮೇಲೆ 6.25 ಕೋಟಿ ರೂ. ಬೆಟ್ ಕಟ್ಟಿದ ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಡ್ರೇಕ್.!

03/06/2025 11:16 AM1 Min Read

ನಿಮ್ಮ ಜನ್ಮ ಕುಂಡಲಿ ರಚನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

03/06/2025 9:41 AM2 Mins Read
Recent News

ಭೂಕಂಪ: ಪಾಕ್ ಜೈಲಿನಿಂದ ಡಜನ್ಗಟ್ಟಲೆ ಕೈದಿಗಳು ಪರಾರಿ

03/06/2025 11:44 AM

ಗಾಝಾದಲ್ಲಿ ಇಸ್ರೇಲಿ ಗುಂಡಿನ ದಾಳಿಗೆ ಕನಿಷ್ಠ 20 ಫೆಲೆಸ್ತೀನೀಯರು ಬಲಿ | Israel-Hamas war

03/06/2025 11:41 AM

ಇಂದು `ವಿಶ್ವ ಬೈಸಿಕಲ್ ದಿನ 2025’: ಈ ದಿನದ ಇತಿಹಾಸ, ಥೀಮ್, ಮಹತ್ವ ತಿಳಿಯಿರಿ | World Bicycle Day 2025

03/06/2025 11:40 AM

BREAKING : ಇಂದು 18ನೇ ಆವೃತ್ತಿಯ `IPL’ ಫೈನಲ್ : ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ‘RCB’ ಯಿಂದ ವೀಡಿಯೋ ರಿಲೀಸ್ | WATCH VIDEO

03/06/2025 11:23 AM
State News
KARNATAKA

BREAKING : ಇಂದು 18ನೇ ಆವೃತ್ತಿಯ `IPL’ ಫೈನಲ್ : ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ‘RCB’ ಯಿಂದ ವೀಡಿಯೋ ರಿಲೀಸ್ | WATCH VIDEO

By kannadanewsnow5703/06/2025 11:23 AM KARNATAKA 1 Min Read

ಅಹಮದಾಬಾದ್ : ಇಂದು ಬಹುನಿರೀಕ್ಷಿತ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫೈನಲ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ…

ಈ ಸಲ ಕಪ್ ನಮ್ದೇ : `RCB’ ಮೇಲೆ 6.25 ಕೋಟಿ ರೂ. ಬೆಟ್ ಕಟ್ಟಿದ ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಡ್ರೇಕ್.!

03/06/2025 11:16 AM

ನಿಮ್ಮ ಜನ್ಮ ಕುಂಡಲಿ ರಚನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

03/06/2025 9:41 AM

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು.!

03/06/2025 9:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.