ಶಿವಮೊಗ್ಗ : ಪೌರ ಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ದುಶ್ಚಟಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದುವ ಮೂಲಕ ಕುಟುಂಬ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾರ್ಗಲ್ ಪಟ್ಟಣದಲ್ಲಿ ಸುಮುಖ ಆಸ್ಪತ್ರೆಯಿಂದ ಪೌರ ಕಾರ್ಮಿಕರಿಗೆ ಹಮ್ಮಿಕೊಂಡಿದ್ದಂತ ಮೆಘಾ ಹೆಲ್ತ್ ಕ್ಯಾಂಪ್ ಉದ್ಘಾಟಿಸಿದರು. ಅಲ್ಲದೇ ವೈದ್ಯ ಅರುಣ ಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿದಂತ ಅವರು, ಊರಿನ ಸ್ವಚ್ಚತೆ ನಿರ್ವಹಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಕೆಲಸದ ಒತ್ತಡ, ಸೇವಿಸುವ ಆಹಾರ ಇನ್ನಿತರೆಗಳಿಂದ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಗಲ್ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಜನರ ಆರೋಗ್ಯ ರಕ್ಷಣೆ ಮಾಡುವ ಪೌರ ಕಾರ್ಮಿಕರ ಆರೋಗ್ಯ ಕಾಪಾಡುವ ಕೆಲಸಕ್ಕೆ ಮುಂದಾಗಿರುವುದು ಆಡಳಿತದ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ ಎಂದರು.
ರಾಜ್ಯ ಸರ್ಕಾರ ಪೌರ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಅಗತ್ಯ ಯೋಜನೆ ರೂಪಿಸಿದೆ. ಇದರ ಜೊತೆ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಕೆಲಸಕ್ಕೆ ಚಾಲನೆ ನೀಡಿದೆ. ಒತ್ತಡರಹಿತವಾಗಿ ಕೆಲಸ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದರು.
ಕಾರ್ಗಲ್ ಪಟ್ಟಣ ಪಂಚಾಯ್ತಿ ಅಧ್ಯಕ್ಷ ರಾಜು ಮಾತನಾಡಿ, ಪೌರ ಕಾರ್ಮಿಕರ ಆರೋಗ್ಯ ತಪಾಸಣೆಗಾಗಿ 2 ಲಕ್ಷ ರೂ. ಮೀಸಲಿಟ್ಟಿದ್ದು, ಆರೋಗ್ಯವೇ ಭಾಗ್ಯ ಎನ್ನುವುದನ್ನು ಪೌರ ಕಾರ್ಮಿಕರ ಅರಿತುಕೊಳ್ಳಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸಂತೋಷದಿಂದ ಜೀವನ ನಡೆಸುವಂತೆ ಆಗಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಗಲ್ ಪಟ್ಟಣ ಪಂಚಾಯ್ತಿ ಸದಸ್ಯರು, ಮುಖ್ಯಾಧಿಕಾರಿ ಸುರೇಶ್ ಇನ್ನಿತರರು ಹಾಜರಿದ್ದರು.
ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ