ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ತೊಂದರೆ ಆಗುತ್ತದೆ ಎಂಬ ಆತಂಕದಲ್ಲಿ ತನ್ನ ಗಂಡ, ಮಕ್ಕಳು, ಅತ್ತೆ, ಮಾವನಿಗೆ ಊಟದಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ್ದ ಆರೋಪದಡಿ ಆರೋಪಿ ಚೈತ್ರಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಚೈತ್ರಾ ಎಂದು ತಿಳಿದುಬಂದಿದೆ.ಕೆರಳೂರು ಗ್ರಾಮದ ಗಜೇಂದ್ರ ಅವರು 11 ವರ್ಷಗಳ ಹಿಂದೆ ಚೈತ್ರಾಳನ್ನು ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. 3 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಗಂಜೇಂದ್ರ ಅವರೊಂದಿಗೆ ಜಗಳ ತೆಗೆಯುತ್ತಿದ್ದ ಚೈತ್ರಾ, ಗಂಡ, ಮಕ್ಕಳಿಗೆ ಬೈಯುತ್ತಿದ್ದಳು.
ಈ ಮಧ್ಯೆ ಚೈತ್ರಾಳಿಗೆ, ಪುನೀತ್ ಎಂಬಾತನ ಜೊತೆ ಅನೈತಿಕ ಸಂಬಂಧ ಬೆಳೆದಿತ್ತು. ಈ ವಿಚಾರವನ್ನು ಚೈತ್ರಾಳ ತಂದೆ- ತಾಯಿಗೆ ತಿಳಿಸಿದ್ದು, ರಾಜಿ ಪಂಚಾಯ್ತಿ ಮಾಡಲಾಗಿತ್ತು. 2024 ರಿಂದ ಚೈತ್ರಾಳಿಗೆ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಅನೈತಿಕ ಸಂಬಂಧ ಬೆಳೆದಿತ್ತು.
ಇದಕ್ಕೆ ಗಂಡ, ಮಕ್ಕಳು, ಅತ್ತೆ, ಮಾವ ತೊಂದರೆ ಆಗುತ್ತಾರೆ ಎಂದು ತಿಳಿದ ಚೈತ್ರಾ, ಕುಟುಂಬದವರಿಗೆ ತಿಳಿಯದಂತೆ ಊಟ, ತಿಂಡಿಯಲ್ಲಿ ವಿಷಕಾರಿ ಮಾತ್ರೆ ಹಾಕಿ ಕೊಲೆಗೆ ಯತ್ನಿಸಿದ್ದಾಳೆ. ಈ ಬಗ್ಗೆ ಅನುಮಾನಗೊಂಡ ಪತಿ ಗಜೇಂದ್ರ, ಬೇಲೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಚೈತ್ರಾಳನ್ನು ಪೊಲೀಸರು ಬಂಧಿಸಿದ್ದಾರೆ.