ಅಹಮದಾಬಾದ್ : ಸತತ 17 ವರ್ಷಗಳ ಕಾಲ ಕಪ್ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿನ್ನೆ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಅಹಮದಾಬಾದ್ ನಲ್ಲಿ ನಿನ್ನೆ ರಾತ್ರಿ ನಡೆದ ಆರ್ಸಿಬಿ ಹಾಗೂ ಪಂಜಾಬ್ ನಡುವಿನ ಪಂದ್ಯದಲ್ಲಿ ಪಂಜಾಬ್ ವಿರುದ್ಧ 6 ಗೆಲುವು ಸಾಧಿಸಿದ ಆರ್ಸಿಬಿ ಮೊದಲ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ.
ಪಂದ್ಯದ ಬಳಿಕ, ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮಾತನಾಡಿ, ತಮ್ಮ ಸೋಲಿಗೆ ಪ್ರಮುಖ ಕಾರಣ ವಿವರಿಸಿದರು. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸೋಲು ದೊಡ್ಡ ನಿರಾಶೆ ತಂದಿದೆ. ನಾವು ಫೈನಲ್ನಲ್ಲಿ ಸೋತಿದ್ದರೂ, ನಮ್ಮ ಹುಡುಗರು ಅವಕಾಶಕ್ಕೆ ತಕ್ಕಂತೆ ಆಡಿದರು. ಈ ಪಂದ್ಯದಲ್ಲಿ ನಾವು ಸೋಲಬಾರದಿತ್ತು ಎಂದರು.
ಕಳೆದ ಪಂದ್ಯದಲ್ಲಿ ನಾವು 200 ರನ್ಗಳ ಗುರಿಯನ್ನು ಸುಲಭವಾಗಿ ಸಾಧಿಸಿದ್ದೇವೆ. ಆದರೆ, ಈ ಪಂದ್ಯದಲ್ಲಿ ಆರ್ಸಿಬಿ ಬೌಲರ್ಗಳು ಅದ್ಭುತ ಬೌಲಿಂಗ್ ಮಾಡಿದರು. ವಿಶೇಷವಾಗಿ ಕೃನಾಲ್ ಪಾಂಡ್ಯ ಅಸಾಧಾರಣ ಪ್ರದರ್ಶನದೊಂದಿಗೆ ಪಂದ್ಯದ ದಿಕ್ಕನ್ನೇ ತಿರುಗಿಸಿದರು. ಅವರು ತಮ್ಮ ಅನುಭವವನ್ನು ಬಳಸಿಕೊಂಡು ಬೌಲಿಂಗ್ ಮಾಡಿದರು. ಆದಾಗ್ಯೂ, ಅವರು ನಿರ್ಭೀತ ಆಟವನ್ನು ಆಡಿದರು. ಮುಂದಿನ ವರ್ಷ ನಾವು ಪ್ರಶಸ್ತಿಯನ್ನು ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ಶ್ರೇಯಸ್ ಅಯ್ಯರ್ ಹೇಳಿದರು.