ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಇಂದು ಸಂಜೆ 4 ಗಂಟೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಈ ವೇಳೆಯಲ್ಲಿ ವಿಧಾನಸೌಧದ ಮುಂದೆ ಆರ್ ಸಿ ಬಿ ಅಭಿಮಾನಿಗಳ ದಾಧಲೆಯೇ ನಡೆಯುತ್ತಿದೆ. ಬ್ಯಾರಿಕೇಡ್ ಹತ್ತಿ ವಿಧಾನಸೌಧದ ಒಳಗೆ ನುಗ್ಗೋದಕ್ಕೆ ಯತ್ನಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಫ್ಯಾನ್ಸ್ ಕಂಟ್ರೋಲ್ ಮಾಡಲು ಹರಸಾಹಸ ಪಡುವಂತೆ ಆಗಿದೆ.
ಇಂದು ಮಾತನಾಡಿದ್ದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಆರ್ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕು ಹೆಮ್ಮೆ ಎನಿಸುತ್ತದೆ. 18 ವರ್ಷಗಳಿಂದ ಸತತ ಆರಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ ಕ್ರೀಡಾಪಟುಗಳಿಗೆ ಉತ್ತಮ ಸಂದೇಶ ಕೊಡುತ್ತದೆ. ಬೆಂಗಳೂರಿನ ಬಗ್ಗೆ ಭಾವನಾತ್ಮಕ ನಂಟಿನ ಬಗ್ಗೆ ಅವರು ಹೇಳಿರುವುದು ಸಂತೋಷ ತಂದಿದೆ ಎಂದಿದ್ದರು.
ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್ಸಿಬಿ ತಂಡಕ್ಕೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಎಲ್ಲ ಆಟಗಾರರು ಬಸ್ನಲ್ಲಿ ಬರುತ್ತಾರೆ. ಕಾರ್ಯಕ್ರಮ ಮುಗಿದ ಬಳಿಕ ಬಸ್ನಲ್ಲೇ ವಾಪಸ್ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುತ್ತಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅಭಿನಂದಿಸುತ್ತಾರೆ. ಆರ್ಸಿಬಿ ತಂಡದ ಪರವಾಗಿ ಇಬ್ಬರು ಮಾತನಾಡಲಿದ್ದಾರೆ. ಇದನ್ನು ಹೊರತುಪಡಿಸಿ ಬೇರೆ ಕಾರ್ಯಕ್ರಮಗಳಿಲ್ಲ ಎಂದು ಹೇಳಿದ್ದರು.
ಭದ್ರತಾ ದೃಷ್ಟಿಯಿಂದ ಆಟಗಾರರು ತೆರೆದ ವಾಹನದಲ್ಲಿ ಸ್ಟೇಡಿಯಂಗೆ ಹೋಗುತ್ತಿಲ್ಲ. ಕೆಎಸ್ಸಿಎ ವತಿಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಿಕೊಳ್ಳಲಿದ್ದಾರೆ. ಅಗತ್ಯ ಪೊಲೀಸ್ ಭದ್ರತೆ, ಟ್ರಾಫಿಕ್ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದರು.
ಬೆಂಗಳೂರಿನ ‘HAL ಏರ್ ಪೋರ್ಟ್’ಗೆ ಬಂದಿಳಿದ RCB ಆಟಾಗರರು: ಅದ್ಧೂರಿ ಸ್ವಾಗತ
ಅಹಮದಾಬಾದ್ ನಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ಆಗಮಿಸಿದಂತ ಆರ್ ಸಿ ಬಿ ತಂಡವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದಂತ ಫೈನಲ್ ಪಂದ್ಯದಲ್ಲಿ 18 ವರ್ಷಗಳ ಬಳಿಕ ಆರ್ ಸಿ ಬಿ ಗೆಲುವು ಕಂಡಿತ್ತು. ಹೀಗಾಗಿ ರಾಜ್ಯ ಸರ್ಕಾರ ತಂಡದ ಆಟಗಾರರಿಗೆ ಸನ್ಮಾನಿಸಿ, ಅಭಿನಂದಿಸುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ ಸಂಜೆ 4 ಗಂಟೆಗೆ ಆರ್ ಸಿ ಬಿ ತಂಡದ ಎಲ್ಲಾ ಆಟಗಾರರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸನ್ಮಾನಿಸಿ, ಅಭಿನಂದಿಸಲಿದ್ದಾರೆ.
ಶಿವಮೊಗ್ಗ: ನಾಳೆ ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ