ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೂಕು ನುಗ್ಗಲಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಡಿಜಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದು, ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದಂತ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ಈ ದುರಂತವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಸಿಐಡಿ ತನಿಖೆಗೂ ಆದೇಶಿಸಿದೆ. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಸಿಐಡಿಯ ಅಧಿಕಾರಿಗಳ ಭೇಟಿ ನೀಡಿ, ಮಾಹಿತಿ ಪಡೆಯುವ ಸಾಧ್ಯತೆ ಇದೆ.