ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಿ.ಕೆ ಶಿವಕುಮಾರ್ ಕಾರಣ ಎಂದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಬಿಜೆಪಿ ದೂರು ನೀಡಿದೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿರುವಂತ ಬಿಜೆಪಿ ನಾಯಕರ ನಿಯೋಗವು, ಅಮಾಯಕರ ಸಾವಿಗೆ ಕಾರಣ, ಸಾರ್ವಜನಿಕ ಹಣ ದುರ್ಬಳಕೆ ಆರೋಪದಡಿ ಕ್ರಮ ಜರುಗಿಸುವಂತೆ ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರಿಂದ ದೂರು ಸಲ್ಲಿಕೆ ಮಾಡಲಾಗಿದೆ. ಈ ವೇಳೆ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಹಾಗೂ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.