ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತ ಸಂಬಂಧ ಕೆ ಎಸ್ ಸಿ ಎಯ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಬಂಧಿತ ಆರೋಪಿಗಳಿಗೆ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇದೇ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗ, ಆರ್ ಸಿ ಬಿ ತಂಡದ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ.
ಇಂದು ಕಾಲ್ತುಳಿತ ಪ್ರಕರಣ ಸಂಬಂಧ ಬಂಧಿತ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಹೀಗಾಗಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದಂತ ಆರ್ ಸಿ ಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್ ಸೋಸಲೆ, ಸುಮಂತ್, ಡಿಎನ್ಎ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಜೈಲುಪಾಲಾದಂತೆ ಆಗಿದೆ.
ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲು ಮಾಡುವಂತೆ ಕಬ್ಬನ್ ಪಾರ್ಕ್ಟ ಠಾಣೆಯ ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. ಹಲವು ಗಂಟೆಗಳ ನಂತ್ರ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಗೂ ಸಂಕಷ್ಟ ಎದುರಾದಂತೆ ಆಗಿದೆ.
BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಜೂ.19ರವರೆಗೆ ಬಂಧಿತ ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ