ನವದೆಹಲಿ: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷವೊಡ್ಡಿದಂತ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಿದ್ದಂತ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೇ 1 ವಾರದಲ್ಲಿ ಕೋರ್ಟ್ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ 1 ಲಕ್ಷ ಹಣದ ಆಮಿಷವೊಡ್ಡಿದ್ದಾರೆ. ಅವರಿಗೆ ನೀಡಲಾಗಿದ್ದಂತ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಗೆ ಸಿಬಿಐ ಮನವಿ ಮಾಡಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ವಿನಯ್ ಕುಲಕರ್ಣಿಗೆ ನೀಡಿದ್ದಂತ ಜಾಮೀನು ರದ್ದುಗೊಳಿಸಿದೆ. ಅಲ್ಲದೇ 1 ವಾರದಲ್ಲಿ ಕೋರ್ಟ್ ಮುಂದೆ ಶರಣಾಗುವಂತೆ ಆದೇಶಿಸಿದೆ. ತಕ್ಷಣವೇ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸುವಂತೆ ಆದೇಶದಲ್ಲಿ ತಿಳಿಸಿದೆ.