Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವಕಪ್ ಗೆದ್ದ ವನಿತೆಯರಿಂದ ‘ಪ್ರಧಾನಿ ಮೋದಿ’ಗೆ ‘NAMO’ ಜೆರ್ಸಿ ಗಿಫ್ಟ್ ; ವೀಡಿಯೋ, ಫೋಟೋ ವೀಕ್ಷಿಸಿ!

05/11/2025 10:19 PM

BREAKING ; ‘RCB’ ಅಧಿಕೃತವಾಗಿ ಮಾರಾಟಕ್ಕೆ ಸಿದ್ಧ ; ಮಾಲೀಕರಿಂದ ‘2 ಬಿಲಿಯನ್ ಡಾಲರ್’ ನಿರೀಕ್ಷೆ : ವರದಿ

05/11/2025 10:04 PM

Alert : ‘ಗೂಗಲ್ ಕ್ರೋಮ್’ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

05/11/2025 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ
KARNATAKA

ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ

By kannadanewsnow0907/06/2025 2:30 PM

ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಸಂಭವಿಸಿದ ಸಾವು- ನೋವಿನ ನೇರ ಹೊಣೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಹೊರಬೇಕಿದೆ. ಅವರು ಅಧಿಕಾರಿಗಳ ಮೂತಿಗೆ ಒರೆಸದೆ, ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಆಗ್ರಹವನ್ನು ಮುಂದಿಟ್ಟಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಹೈಕೋರ್ಟಿನ ಪ್ರಸಕ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು. ಯಾರ ತಪ್ಪೆಂಬುದು ಹೊರಬರಲಿ ಎಂದು ಅಭಿಪ್ರಾಯಪಟ್ಟರು.

ಪ್ರಕರಣದ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ನೀವು ಯಾವುದೇ ನಿರ್ಧಾರ ಮಾಡಿದರೂ ಅದಕ್ಕೆ ನಾವು ಸಿದ್ಧ ಎಂದು ಸರಕಾರ ತಿಳಿಸಲಿ ಎಂದು ಸವಾಲೆಸೆದರು.

ಬೆಂಗಳೂರು ಪೊಲೀಸ್ ಕಮೀಷನರ್ ಸರಕಾರದ ಅಂಗವೇ ಆಗಿದ್ದಾರೆ. ಸರಕಾರದ್ದೇನೂ ತಪ್ಪಿಲ್ಲವೆಂದಾದರೆ ಅವರನ್ನು ಅಮಾನತು ಮಾಡುವುದು ಸರಕಾರಕ್ಕೆ ಕಪ್ಪು ಚುಕ್ಕಿ ಎಂದು ಯಾಕೆ ಅನಿಸಿಲ್ಲ ಎಂದು ಕೇಳಿದರು.

ಇವತ್ತು ಆರ್‍ಸಿಬಿಯವರು, ಮ್ಯಾನೇಜ್‍ಮೆಂಟ್ ತಂಡದವರನ್ನೂ ಬಂಧಿಸಿದ್ದಾರೆ. ಯಾಕೆ ನಿಮ್ಮನ್ನು ಬಂಧಿಸಬಾರದು? ನಟ ಅಲ್ಲು ಅರ್ಜುನ್ ಕಾರ್ಯಕ್ರಮದಲ್ಲಿ ಒಬ್ಬರು ಸತ್ತಾಗ ಅಲ್ಲು ಅರ್ಜುನ್‍ರನ್ನು ಮನೆಯಿಂದ ಎಳೆದುಕೊಂಡು ಬಂದಿದ್ದರು. ಅಲ್ಲಿಯೂ ಕಾಂಗ್ರೆಸ್ ಸರಕಾರ ಇತ್ತು. ಅವರಂತೆ ಇಲ್ಲಿ ಯಾಕೆ ಆಗುತ್ತಿಲ್ಲ ಎಂದು ಕೇಳಿದರು. ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ ಸುರ್ಜೇವಾಲಾ ಎಲ್ಲಿದ್ದೀರಪ್ಪ ನೀವು? ಎಂದು ಪ್ರಶ್ನಿಸಿದರು.

ಪೋಷಕರ ಜೀವನೋತ್ಸಾಹ ಕಸಿದ ಸಾವು..

ಕರ್ನಾಟಕ ರಾಜ್ಯವು ಶೋಕಾಚರಣೆಯಲ್ಲಿದೆ. ಇರುವ ಒಬ್ಬೊಬ್ಬರೇ ಮಕ್ಕಳನ್ನು ತಂದೆ- ತಾಯಂದಿರು ಕಳಕೊಂಡಿದ್ದಾರೆ. ನನ್ನ ಕ್ಷೇತ್ರದ ಎಂ.ಟೆಕ್ ಓದುವ ಹುಡುಗನೊಬ್ಬ ಮೃತಪಟ್ಟಿದ್ದು, ಅವನ ಮನೆಗೆ ಹೋಗಬೇಕೆಂದಿದ್ದೆ. ಮೃತನ ತಂದೆ ಎಂಎಸ್‍ಎಂಇ ಕೈಗಾರಿಕೋದ್ಯಮಿ. ಅವರ ಕುಟುಂಬ ತೀವ್ರ ಖಿನ್ನತೆಗೆ ಸಿಲುಕಿದ್ದು, ಮಗನ ಮೃತದೇಹವನ್ನೇ ಮನೆಗೆ ತರಲಿಲ್ಲ ಎಂದು ಶೋಭಾ ಕರಂದ್ಲಾಜೆ ಅವರು ಬೇಸರ ವ್ಯಕ್ತಪಡಿಸಿದರು.

ಯಾರೂ ನೋಡಲು ಬರಬೇಡಿ ಎಂದು ಹೇಳಿದ್ದಾಗಿ ವಿವರಿಸಿದರು. ಒಬ್ಬನೇ ಮಗನನ್ನು ಕಳಕೊಂಡ ನಾವ್ಯಾಕೆ ಬದುಕಿರಬೇಕು ಎಂಬ ರೀತಿಯಲ್ಲಿ ತಂದೆ ತಾಯಿ ಮಾತನಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಸರಕಾರಕ್ಕೆ ಗಾಯಾಳುಗಳ ಮಾಹಿತಿ ಇಲ್ಲ…

ಕರ್ನಾಟಕದಲ್ಲಿ 11 ಜನರು ಸತ್ತಿದ್ದಾರೆ. 70ಕ್ಕೂ ಹೆಚ್ಚು ಜನರು ಚಿಕಿತ್ಸೆಗೆ ದಾಖಲಾಗಿದ್ದಾರೆ. ಬಿಕಾಂ ಓದುವ ಹುಡುಗನ ಕಾಲು ಮುರಿದಿದೆ. ನಾವು ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗಳಿಗೆ ಫೋನ್ ಮಾಡಿ ಒಳ್ಳೆಯ ಆಸ್ಪತ್ರೆಗೆ ಸೇರಿಸಲು ಒತ್ತಾಯಿಸಿದೆ ಎಂದು ತಿಳಿಸಿದರು. ಮುಖ್ಯ ಕಾರ್ಯದರ್ಶಿಗಳಿಗೆ 70 ಜನರ ಮಾಹಿತಿ ಇಲ್ಲ; ಅವರೆಲ್ಲ ಎಲ್ಲಿದ್ದಾರೆ? ಅದೆಲ್ಲವನ್ನೂ ಸರಕಾರ ಮುಚ್ಚಿ ಹಾಕುತ್ತಿದೆ ಎಂದು ಆಕ್ಷೇಪಿಸಿದರು. ವೈದೇಹಿ ಆಸ್ಪತ್ರೆಯಲ್ಲಿ ಗಾಯಾಳುಗಳ ಕುಟುಂಬವೇ ಬಿಲ್ ಕಟ್ಟುತ್ತಿದೆ. ಸರಕಾರ ತಾವು ಕೊಡುವುದಾಗಿ ಹೇಳುತ್ತಿದೆ ಎಂದು ದೂರಿದರು. ಯಾವಾಗ ಕೊಡುತ್ತೀರಿ? ಎಂದು ಪ್ರಶ್ನೆ ಮಾಡಿದರು.

ಪದವಿ ಓದುವ ಒಂದು ಹೆಣ್ಮಗುವಿನ ಗರ್ಭಕೋಶಕ್ಕೆ ತೊಂದರೆಯಾಗಿದೆ. ಒಂದೇ ದಿನದಲ್ಲಿ ತಾಯಿ ಖಿನ್ನತೆಗೆ ಒಳಗಾಗಿ ಅಳುತ್ತ ಕೂತಿದ್ದಾರೆ. ಒಂದು ಪೊಲೀಸ್ ಇಲ್ಲ; ಸರಕಾರದವರು ಹೋಗಿ ನೋಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಅಲ್ಲಿ ಹೋದರೆ ರೋಗಿ ಎಲ್ಲಿದ್ದಾರೆಂದು ಯಾರಿಗೂ ಗೊತ್ತಿಲ್ಲ. ಇದು ಸರಕಾರದ ವ್ಯವಸ್ಥೆ ಎಂದು ಟೀಕಿಸಿದರು.

ಮುಖ್ಯಮಂತ್ರಿಯವರು ಮೊದಲು ತನಿಖೆಗೆ ಜಿಲ್ಲಾಧಿಕಾರಿ (ಡಿ.ಸಿ.) ಜಗದೀಶ್ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದರು. ಒಬ್ಬ ಡಿ.ಸಿ.ಯಿಂದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿ ತನಿಖೆ ಮಾಡಲು ಸಾಧ್ಯವೇ? ತನಿಖೆ ಮಾಡಲು ಅವರಿಗೆ ಧೈರ್ಯ ಇದೆಯೇ ಎಂದು ಕೇಳಿದರು. ಉಡುಪಿ ಡಿ.ಸಿ. ಆಗಿದ್ದ ಜಗದೀಶ್ ಅವರೊಬ್ಬ ಪಾಪದ ವ್ಯಕ್ತಿ ಎಂದರು.

ನಾವು ಆಕ್ಷೇಪಿಸಿದ ಬಳಿಕ ನ್ಯಾ.ಮೈಕೆಲ್ ಡಿಕುನ್ಹ ಅವರ ಸಮಿತಿ ರಚಿಸಲಾಗಿದೆ. ಅವರು ಈಗಾಗಲೇ ಕೋವಿಡ್ ಹಗರಣಗಳ ಕುರಿತ ತನಿಖೆ ಮಾಡುತ್ತಿದ್ದಾರೆ. ಅದೇ ವರದಿಯನ್ನೂ ಅವರು ಕೊಟ್ಟಿಲ್ಲ; ಅವರಿಗೆ ಎರಡನೇ ಜವಾಬ್ದಾರಿ ಯಾಕೆ? ನಿವೃತ್ತ ನ್ಯಾಯಾಧೀಶರ ಕುರಿತು ನಮ್ಮದೇನೂ ವಿರೋಧ ಇಲ್ಲ. ಆದರೆ, ಅವರೊಬ್ಬರೇ ನಿಮಗೆ ಸಿಗುತ್ತಾರಾ? ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಉದ್ದೇಶ ಏನು? ಎಂದು ಕೇಳಿದರಲ್ಲದೆ, ಪ್ರಕರಣವನ್ನು ಮುಚ್ಚಿ ಹಾಕುವುದಕ್ಕೆಂದೇ ಜಗದೀಶ್ ಮತ್ತು ನ್ಯಾ. ಮೈಕೆಲ್ ಡಿಕುನ್ಹ ಅವರಿಗೆ ತನಿಖೆ ವಹಿಸಿದ್ದಾರೆ ಎಂದು ಆರೋಪಿದರು.

ತಪ್ಪಿಸಿಕೊಳ್ಳುವ ಯತ್ನ

ಸಿದ್ದರಾಮಯ್ಯನವರು ತಪ್ಪಿಸಿಕೊಳ್ಳಲು ನೋಡುತ್ತಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್.ಸಿ.ಬಿ. ತಂಡಕ್ಕೆ ಅಭಿನಂದನೆ ಇರುವ ಕುರಿತು, ಹಬ್ಬದ ವಾತಾವರಣದ ಬಗ್ಗೆ ಹಾಗೂ ಎಲ್ಲರೂ ಬರುವಂತೆ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದರು ಎಂದು ವಿವರಿಸಿದರು.

ರಾಜ್ಯ ಕ್ರಿಕೆಟ್ ಸಂಸ್ಥೆಯು 3ರಂದು ಒಂದು ಪತ್ರ ಬರೆದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ತಿಳಿಸಿದ್ದರು. ಡಿಪಿಆರ್ ಕಾರ್ಯದರ್ಶಿಗೆ ಈ ಪತ್ರ ಬರೆದಿದ್ದರು ಎಂದು ಗಮನ ಸೆಳೆದರು. ನಿಮ್ಮ ಡಿಪಿಆರ್ ಕಾರ್ಯದರ್ಶಿ, ನಿಮ್ಮ ಮುಖ್ಯ ಕಾರ್ಯದರ್ಶಿ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳೇ ಇದು ನೀವು ನಡೆದುಕೊಂಡ ರೀತಿ ಎಂದು ಟೀಕಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಅವರು ಉಪಸ್ಥಿತರಿದ್ದರು.

ಫೈನಲ್ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ‘RCB’ ಮನವಿ: ತೀವ್ರ ಅಚ್ಚರಿ ವ್ಯಕ್ತಪಡಿಸಿದ ‘HDK’

BIG NEWS: ರಾಜ್ ಕುಮಾರ್ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ?- ಗೋಪಾಲಕೃಷ್ಣ ಬೇಳೂರು ಪ್ರಶ್ನೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

05/11/2025 8:44 PM2 Mins Read

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

05/11/2025 4:48 PM1 Min Read

BREAKING : SSLC, ದ್ವಿತೀಯ PUC- 2026ರ ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

05/11/2025 4:39 PM1 Min Read
Recent News

ವಿಶ್ವಕಪ್ ಗೆದ್ದ ವನಿತೆಯರಿಂದ ‘ಪ್ರಧಾನಿ ಮೋದಿ’ಗೆ ‘NAMO’ ಜೆರ್ಸಿ ಗಿಫ್ಟ್ ; ವೀಡಿಯೋ, ಫೋಟೋ ವೀಕ್ಷಿಸಿ!

05/11/2025 10:19 PM

BREAKING ; ‘RCB’ ಅಧಿಕೃತವಾಗಿ ಮಾರಾಟಕ್ಕೆ ಸಿದ್ಧ ; ಮಾಲೀಕರಿಂದ ‘2 ಬಿಲಿಯನ್ ಡಾಲರ್’ ನಿರೀಕ್ಷೆ : ವರದಿ

05/11/2025 10:04 PM

Alert : ‘ಗೂಗಲ್ ಕ್ರೋಮ್’ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

05/11/2025 9:57 PM

ಇನ್ಮುಂದೆ ತರಬೇತಿ ಕೇಂದ್ರಗಳ ಶುಲ್ಕದಿಂದ ಚಟುವಟಿಕೆಗಳವರೆಗೆ ಎಲ್ಲವೂ ಮೇಲ್ವಿಚಾರಣೆ ; ‘ಸುಪ್ರೀಂ’ಗೆ ಕೇಂದ್ರದಿಂದ ಅಫಿಡವಿಟ್

05/11/2025 9:24 PM
State News
KARNATAKA

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

By kannadanewsnow0905/11/2025 8:44 PM KARNATAKA 2 Mins Read

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 2 ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ 44 ಗ್ರಾಂ…

BIG NEWS : ಮುಂದಿನ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ : ಮಾಜಿ ಸಂಸದ ಡಿಕೆ ಸುರೇಶ್ 

05/11/2025 4:48 PM

BREAKING : SSLC, ದ್ವಿತೀಯ PUC- 2026ರ ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

05/11/2025 4:39 PM

ಕುರುಬ ಸಮಾಜದ ಸಂಪ್ರದಾಯದಂತೆ ಮಾಜಿ ಸಚಿವ ಎಚ್ ವೈ ಮೇಟಿ ಅಂತ್ಯಕ್ರಿಯೆ : ಸಿಎಂ ಸೇರಿ ಹಲವರು ಗಣ್ಯರು ಭಾಗಿ

05/11/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.