ಮೈಸೂರು: ಮುಡಾದಲ್ಲಿ ಅಕ್ರಮವಾಗಿ ಸೈಟ್ ಮಂಜೂರಾತಿ ಪ್ರಕರಣ ಸಂಬಂಧ ಸರಿಯಾಗಿ ತನಿಖೆ ನಡೆಸದೇ ಹಿರಿಯ ಅಧಿಕಾರಿಗಳು ವರದಿ ನೀಡುತ್ತಿರುವುದಾಗಿ ಆರೋಪಿಸಿ ಸ್ನೇಹಮಯಿ ಕೃಷ್ಣ ಕೇಂದ್ರ ಜಾಗೃತಿ ಆಯೋಗಕ್ಕೆ ದೂರು ನೀಡಿದ್ದರು. ಈ ದೂರನ್ನು ಕೇಂದ್ರ ಜಾಗೃತಿ ಆಯೋಗವು ಸ್ವೀಕರಿಸಿದೆ.
ಈ ಮಾಹಿತಿಯನ್ನು ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಹಂಚಿಕೊಂಡಿದ್ದು, ಮುಡಾ ಪ್ರಕರಣದಲ್ಲಿ 1ನೇ ಆರೋಪಿ ಸಿದ್ದರಾಮಯ್ಯ ಸೇರಿದಂತೆ ಆರೋಪಿಗಳನ್ನು ರಕ್ಷಣೆ ಮಾಡುವ ಸಲುವಾಗಿ ಕರ್ತವ್ಯಕ್ಕೆ ವಿರುದ್ದವಾಗಿ ನಡೆದುಕೊಂಡು ಸುಳ್ಳು ವರದಿ ಸಲ್ಲಿಸಿರುವ ತನಿಖಾಧಿಕಾರಿ ಮತ್ತು ಹಿರಿಯ ಅಧಿಕಾರಿಯ ವಿರುದ್ದ ಕ್ರಮ ತೆಗೆದುಕೊಳ್ಳಲು ನಾನು ನೀಡಿದ ದೂರರ್ಜಿಯನ್ನು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗದವರು, ನನ್ನ ದೂರನ್ನು ನೊಂದಾಯಿಸಿಕೊಂಡು ಪರಿಶೀಲನೆ ನಡೆಸುತ್ತಿರುವುದಾಗಿ ಸಂದೇಶ ಕಳುಹಿಸಿರುವುದಾಗಿ ಹೇಳಿದ್ದಾರೆ.
ಐ.ಪಿ.ಎಸ್ ಅಧಿಕಾರಿಗಳು ಅಂದ ಮಾತ್ರಕ್ಕೆ ಸರ್ವಾಧಿಕಾರಿಗಳಂತೆ ನಡೆದುಕೊಳ್ಳಲು ಸಾಧ್ಯವಿಲ್ಲ. ಕರ್ತವ್ಯಕ್ಕೆ ವಿರುದ್ದವಾಗಿ ನಡೆದುಕೊಂಡರೆ, ಅಪರಾಧ ಕೃತ್ಯಗಳನ್ನು ಎಸಗಿದರೆ ಶಿಕ್ಷೆಗೆ ಒಳಗಾಗಲೇ ಬೇಕು ಎಂಬುದಾಗಿ ತಿಳಿಸಿದ್ದಾರೆ.
BREAKING: ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ: ಒಂದೇ ದಿನ 265 ಮಂದಿಗೆ ಸೋಂಕು ದೃಢ | Covid19 Update
ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ