Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪ್ರಧಾನಿ ಮೋದಿ ಹಾಗೂ ಅವರ ತಾಯಿಯ AI ವಿಡಿಯೋ ಹರಿಬಿಟ್ಟ ಕಾಂಗ್ರೆಸ್ ವಿರುದ್ಧ FIR ದಾಖಲು | PM Modi AI Video

13/09/2025 7:38 PM

ಮಾಜಿ ಸಚಿವ ಪ್ರಭು ಚೌವ್ಹಾಣ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿ ಅರೆಸ್ಟ್

13/09/2025 7:29 PM

ಶಿವಮೊಗ್ಗ: ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ‘ನಾಗೋಡಿ ವಿಶ್ವನಾಥ್’ ನೇಮಕ

13/09/2025 7:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸೋದು, ರಾಜಕೀಯವಾಗಿ ರಾಜೀನಾಮೆ ಕೇಳೋದು ಅಭ್ಯಾಸವಾಗಿದೆ : ಸಿಎಂ
KARNATAKA

ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸೋದು, ರಾಜಕೀಯವಾಗಿ ರಾಜೀನಾಮೆ ಕೇಳೋದು ಅಭ್ಯಾಸವಾಗಿದೆ : ಸಿಎಂ

By kannadanewsnow0511/06/2025 1:37 PM

ಚಿಕ್ಕಬಳ್ಳಾಪುರ : ಜೂನ್ 11: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಎಂದು ಪ್ರಶ್ನಿಸಿದರು.

ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು. ಇಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಾಮಾಜಿಕ ,ಆರ್ಥಿಕ, ಶೈಕ್ಷಣಿಕ ಸಮೀಕ್ಷೆ: ಮರು ಗಣತಿ

ಜಾತಿ ಗಣತಿ ಬಗ್ಗೆ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ. ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದರು.

ಗ್ರೇಟರ್ ಬೆಂಗಳೂರಿಗೆ ತುಮಕೂರು: ಸಚಿವ ಸಂಪುಟದಲ್ಲಿ ಚರ್ಚೆ

ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು.

30 ದಿನಗಳಲ್ಲಿ ವರದಿ

ಕಾಲ್ತುಳಿತ ಪ್ರಕರಣದಲ್ಲಿ ಅನೇಕ ಆಯೋಗ ರಚನೆಯಾಗಿದ್ದು ಇವು ತಾರ್ಕಿಕ ಅಂತ್ಯ ಕಾಣುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ ಎಂದರು.

ಪಕ್ಷದ ವರಿಷ್ಠರ ತೀರ್ಮಾನ

ಕಾಂತರಾಜ ಆಯೋಗ ವರದಿ ಬಗ್ಗೆ ಪಕ್ಷದ ವರಿಷ್ಠರ ನಿರ್ಧಾರ ಮುಖ್ಯಮಂತ್ರಿಗಳಿಗೆ ನಿರಾಸೆ ತಂದಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಪಕ್ಷದ ವರಿಷ್ಠರು ನಿರ್ಧಾರ ಮಾಡಿದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ತೀರ್ಮಾನವಲ್ಲ ಎಂದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ

ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿ ಖಾಲಿ ಇರುವಡೆಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇನ್ನು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು, ಅವರ ವೇತನವನ್ನು ಹೆಚ್ಚಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ನಮ್ಮ ಸರ್ಕಾರ ಒತ್ತುನೀಡಿದೆ ಎಂದರು.

ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ

ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿ ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ

ಜಲ ಜೀವನ್ ಯೋಜನೆಯಡಿ ರಾಜ್ಯ ಸರ್ಕಾರ 50% ಅನುದಾನ ನೀಡಿದ್ದಾರೆ 30% ಮಾತ್ರ ಕೇಂದ್ರ ಸರ್ಕಾರ ನೀಡುತ್ತದೆ. 20% ಫಲಾನುಭವಿಗಳು ನೀಡುತ್ತಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ರಾಜ್ಯ ಸರ್ಕಾರದ ಪಾಲು ಹೆಚ್ಚಿದ್ದರೂ ಆಯುಷ್ಮಾನ್ ಭಾರತ್ ಯೋಜನೆ ಎನ್ನುತ್ತಾರೆ. ಅನೇಕ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಧಾನ ಮಂತ್ರಿಗಳ ಹೆಸರಿರುತ್ತದೆ. ಕುಸುಮ್ ಬಿ ಯೋಜನೆಯಡಿ 30% ಕೇಂದ್ರದಿಂದ ಬರುತ್ತದೆ. ಒಪ್ಪದೇ ಹೋದರೆ ಅದೂ ಬರುವುದಿಲ್ಲ. ರೈತರಿಗೆ ಒಳ್ಳೆಯದಾಗಬೇಕು, ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಇದನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.

ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣವಾಗಲಿದೆ

ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಮುಕ್ತಾಯವಾಗಬಹುದು ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಭಾಗದ ಸಚಿವರು, ಶಾಸಕರು, ಹಾಗೂ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲಾಗಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಳೆದ ವರ್ಷ 52000 ಕೋಟಿ ರೂ.ಗಳ ಬಂಡವಾಳ ವೆಚ್ಚ ಇತ್ತು. ಈ ವರ್ಷ 83 ಸಾವಿರ ಕೋಟಿಯಾಗಿದೆ ಎಂದರು. 31000 ಕೋಟಿ ಬಂಡವಾಳ ವೆಚ್ಚ ಒಂದು ವರ್ಷದಲ್ಲಿ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರ ದಿವಾಳಿ ಹೇಗೆ ಆಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಐವತ್ತು ಸಾವಿರಕ್ಕೂ ಹೆಚ್ಚು ಅನುದಾನ ಒದಗಿಸಲಾಗಿದೆ ಎಂದರು.

ಎರಡು ವರ್ಷಗಳಲ್ಲಿ 242 ಭರವಸೆಗಳನ್ನು ಈಡೇರಿಸಿದೆ

ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿದ್ದು, ಕೇಂದ್ರ ಸರ್ಕಾರ 600 ಭರವಸೆಗಳನ್ನು ನೀಡಿ ಶೇ.10ರಷ್ಟನ್ನೂ ಅನುಷ್ಠಾನ ಮಾಡಿಲ್ಲ ಎಂದರು.

Share. Facebook Twitter LinkedIn WhatsApp Email

Related Posts

ಮಾಜಿ ಸಚಿವ ಪ್ರಭು ಚೌವ್ಹಾಣ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿ ಅರೆಸ್ಟ್

13/09/2025 7:29 PM1 Min Read

ಶಿವಮೊಗ್ಗ: ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ‘ನಾಗೋಡಿ ವಿಶ್ವನಾಥ್’ ನೇಮಕ

13/09/2025 7:24 PM2 Mins Read

ಒಂದು ಮಂತ್ರ ಸಾಕು ಸಾಲ ತೀರುತ್ತೆ, ಇದು ಮನಿ ಲೋನ್ ಋಣ ತೀರಿಸಲು ಗುಪ್ತ ರಹಸ್ಯ ತಂತ್ರ ಪ್ರಯೋಗ

13/09/2025 7:06 PM5 Mins Read
Recent News

BREAKING: ಪ್ರಧಾನಿ ಮೋದಿ ಹಾಗೂ ಅವರ ತಾಯಿಯ AI ವಿಡಿಯೋ ಹರಿಬಿಟ್ಟ ಕಾಂಗ್ರೆಸ್ ವಿರುದ್ಧ FIR ದಾಖಲು | PM Modi AI Video

13/09/2025 7:38 PM

ಮಾಜಿ ಸಚಿವ ಪ್ರಭು ಚೌವ್ಹಾಣ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿ ಅರೆಸ್ಟ್

13/09/2025 7:29 PM

ಶಿವಮೊಗ್ಗ: ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ‘ನಾಗೋಡಿ ವಿಶ್ವನಾಥ್’ ನೇಮಕ

13/09/2025 7:24 PM

ಕಾರು ಪ್ರಿಯರೇ, ಸೆ. 22ರ ಬಳಿಕ ಯಾವ ಕಾರಿನ ಬೆಲೆ ಎಷ್ಟು ಕಡಿಮೆಯಾಗುತ್ತೆ ಗೊತ್ತಾ? ಪೂರ್ಣ ವಿವರ ಇಲ್ಲಿದೆ!

13/09/2025 7:11 PM
State News
KARNATAKA

ಮಾಜಿ ಸಚಿವ ಪ್ರಭು ಚೌವ್ಹಾಣ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿ ಅರೆಸ್ಟ್

By kannadanewsnow0913/09/2025 7:29 PM KARNATAKA 1 Min Read

ಬೀದರ್: ಜಿಲ್ಲೆಯ ಬಿಜೆಪಿ ಶಾಸಕ, ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಅಶ್ಲೀಲ ವೀಡಿಯೋ ಕಳುಹಿಸಿ, 30 ಸಾವಿರ ಹಣಕ್ಕೆ…

ಶಿವಮೊಗ್ಗ: ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ‘ನಾಗೋಡಿ ವಿಶ್ವನಾಥ್’ ನೇಮಕ

13/09/2025 7:24 PM

ಒಂದು ಮಂತ್ರ ಸಾಕು ಸಾಲ ತೀರುತ್ತೆ, ಇದು ಮನಿ ಲೋನ್ ಋಣ ತೀರಿಸಲು ಗುಪ್ತ ರಹಸ್ಯ ತಂತ್ರ ಪ್ರಯೋಗ

13/09/2025 7:06 PM

ಅಲ್ಪಸಂಖ್ಯಾತರನ್ನು ಕಂಡರೆ ಭಯ ಹೆಚ್ಚಾಗಿ ರಣಹೇಡಿತನವನ್ನು ಕಾಂಗ್ರೆಸ್ ಸರ್ಕಾರ ಪ್ರದರ್ಶನ: ಛಲವಾದಿ ನಾರಾಯಣಸ್ವಾಮಿ

13/09/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.