ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಜೈನ ಬಸಿದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರುಗಳಿಗೆ ಮಾಸಿಕ ಗೌರವಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬಸದಿ ನೋಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಅರ್ಚಕರುಗಳ ಭಾವಚಿತ್ರ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ದಾಖಲೆ, ಅರ್ಚಕರ ಬ್ಯಾಂಕ್ ಖಾತೆ ವಿವರ, ಅರ್ಚಕರುಗಳ ಆಧಾರ್ ಕಾರ್ಡ್ ಪ್ರತಿ, ಮಾಹೆವಾರು ಕರ್ತವ್ಯದ ಹಾಜರಾತಿ, ಸೇವಾ ದೃಢೀಕರಣ ಪತ್ರ, ಧಾರ್ಮಿಕ ವಿದ್ಯಾರ್ಹತೆ ಕುರಿತು ಅಗತ್ಯ ದಾಖಲೆ, 200/- ರೂ.ಗಳ ಛಾಪಾ ಕಾಗದದಲ್ಲಿ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಜೂ. 16 ರಿಂದ 30ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಗಾಯಗೊಂಡವರ ರಕ್ಷಣೆಗೆ ಮುಂದಾಗಿದ್ದ ವ್ಯಕ್ತಿ ಸೇರಿ ಮೂವರು ಸಾವು
ಅಹಮದಾಬಾದ್ ವಿಮಾನ ದುರಂತ: ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು