ಬೆಂಗಳೂರು : ಕಳೆದ ಜೂನ್ ನಾಲ್ಕರಂದು ತೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 ಜನ ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈಗ ಈ ಒಂದು ಪ್ರಕರಣದ ತನಿಖಾಧಿಕಾರಿ ಜಗದೀಶ್ ಅವರು ಅಧಿಕಾರಿಗಳ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ.
ಹೌದು ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದರು. ಇ ಹಿನ್ನೆಲೆ ಗಾಯಾಳುಗಳ ಹೇಳಿಕೆಗಳನ್ನು ಇದೀಗ ಜಿಲ್ಲಾಧಿಕಾರಿ ದಾಖಲಿಸಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಜಗದೀಶ್ ಅವರು ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಡಿಸಿ ನ್ಯಾಯಾಲಯ ಸಭಾಂಗಣದಲ್ಲಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಯಾವ ಸಮಯದಲ್ಲಿ ಘಟನೆ ಸಂಭವಿಸಿತು? ಯಾವ ಕಾರಣದಿಂದ ಕಾಲ್ತುಳಿತ ಉಂಟಾಯಿತು? ಘಟನೆ ದಿನವೇ ಗಾಯಾಳುಗಳು ಸಮಸ್ಯೆಯ ಬಗ್ಗೆ ಹೇಳಿಕೆ ನೀಡಿದ್ದರು. ಇದೀಗ ಇಂದು ಅಧಿಕಾರಿಗಳ ಹೇಳಿಕೆಯನ್ನು ತನಿಖಾಧಿಕಾರಿ ಜಗದೀಶ್ ರವರು ಪಡೆದಿದ್ದಾರೆ. ಅಲ್ಲದೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಕೂಡ ತನಿಖೆಯನ್ನು ಚುರುಕುಗೊಳಿಸಿದೆ.