ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಕೋರ್ಟಿಗೆ ಶರಣಾಗಲು ಮತ್ತಷ್ಟು ಕಾಲಾವಕಾಶಕ್ಕೆ ಯತ್ನಿಸಿದರು.
ಸುಪ್ರೀಂ ಕೋರ್ಟ್ ನಲ್ಲಿ ಶಾಸಕ ವಿನಯ್ ಕುಲಕರ್ಣಿ ಪರ ವಕೀಲರು ಶರಣಾಗಲು ಕಾಲಾವಕಾಶ ಕೋರಿದ್ದರು. ಆದರೆ ಅವರ ಯತ್ನ ವಿಫಲವಾಗಿದೆ. ಶಾಸಕ ಮತ್ತು ಕರ್ನಾಟಕ ನೀರು ಸರಬರಾಜು ಮಂಡಳಿ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಪೂರ್ವ ನಿಗದಿ ಕಾರ್ಯಕ್ರಮಗಳು ಇರುವುದರಿಂದ ಶರಣಾಗಲು ಕಾಲಾವಕಾಶ ಕೋರಿದ್ದರು. ಆದರೆ ಸುಪ್ರೀಂ ಕೋರ್ಟ್ ವಿನಯ್ ಕುಲಕರಣಿಗೆ ಕಾಲಾವಕಾಶ ನೀಡಲು ನಿರಾಕರಿಸಿದೆ.
ಈ ಹಿನ್ನೆಲೆ ಇಂದು ಶಾಸಕವನ್ನೇ ಕುಲಕರ್ಣಿ ಅವರನ್ನು ಕೋರ್ಟ್ ಬಳಿ ಸಿಬಿಐ ವಶಕ್ಕೆ ಪಡೆದುಕೊಂಡಿತ್ತು. ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ರದ್ದು ಹಿನ್ನೆಲೆಯಲ್ಲಿ ಸಿಬಿಐ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದುಕೊಂಡು ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟಿದ್ದಾರೆ.