ವಿಲಕಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಯಿಂದ ಬಳಲುತ್ತಿರುವ ಶೇ.75 ಕ್ಕಿಂತ ಹೆಚ್ಚು ವಿಕಲತೆ ಪ್ರಮಾಣ ಹೊಂದಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000 ಪ್ರೋತ್ಸಾಹಧನದ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲ್ಲೂಕಿನ ಗ್ರಾ.ಪಂ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು/ನಗರ ಮಟ್ಟದಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಯುಡಿಐಡಿ ಕಾರ್ಡ್, ಸಕ್ಷಮ ಪ್ರಾಧಿಕಾರಿದಿಂದ ಪಡೆದ ಜಾತಿ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆರೈಕೆದಾರರ ಬ್ಯಾಂಕ್ ಪಾಸ್ ಬುಕ್, 2 ಜಂಟಿ ಭಾವಚಿತ್ರ, ಆರೈಕೆದಾರರ ಹಾಗೂ ವಿಕಲಚೇತನರ ಆಧಾರ ಕಾರ್ಡ್ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಜೂ.30 ರೊಳಗಾಗಿ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ.: 08182-251676, ಶಿವಮೊಗ್ಗ ತಾಲ್ಲೂಕು ಪಂಚಾಯತ್ನ ಡಿ.ಎಸ್.ಮಲ್ಲಿಕಾರ್ಜುನ-9980150110, ಭದ್ರಾವತಿ ತಾಲ್ಲೂಕು ಪಂಚಾಯತ್ನ ದಿನೇಶ-7899137243, ಶಿಕಾರಿಪುರ ತಾಲ್ಲೂಕು ಪಂಚಾಯತ್ನ ಎಂ.ಹುಚ್ಚರಾಯಪ್ಪ-9741161346, ಸಾಗರ ತಾಲ್ಲೂಕು ಪಂಚಾಯತ್ನ ಕೆ.ಎನ್.ಶ್ಯಾಮ್ ಸುಂದರ್-9535247757, ಸೊರಬ ತಾಲ್ಲೂಕು ಪಂಚಾಯತ್ನ ಹೆಚ್.ಸಿ.ಭರತ್ ಕುಮಾರ್-9110493122, ತೀರ್ಥಹಳ್ಳಿ ತಾಲ್ಲೂಕು ಪಂಚಾಯತ್ನ ಬಿ.ಆರ್.ದಿನಾಕರ-9480767638, ಹೊಸನಗರ ತಾಲ್ಲೂಕು ಪಂಚಾಯತ್ನ ರವಿಕುಮಾರ್-9731922693 ಗಳನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಣಾಧಿಕಾರಿ ತಿಳಿಸಿದ್ದಾರೆ.