ಧಾರವಾಡ: ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ಸಿ.ಡಿ ಗೀತಾ ಅವರ ಕಾರು ಅಪಘಾತಗೊಂಡಿರುವುದಾಗಿ ತಿಳಿದು ಬಂದಿದೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರು ಬಳಿಯಲ್ಲಿ ಎಡಿಸಿ ಸಿ.ಡಿ ಗೀತಾ ಅವರ ಕಾರಿಗೆ ಸಿಲಿಂಡರ್ ತುಂಬಿದ್ದ ಕ್ಯಾಂಟರ್ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಳೆಹಾನಿ ವೀಕ್ಷಣೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಜೊತೆಗೆ ಎಡಿಸಿ ಗೀತಾ ತೆರಳಿದ್ದರು. ಮಳೆಹಾನಿ ಪ್ರದೇಶ ಪರಿಶೀಲಿಸಿ ಹಿಂದಿರುಗುವಾಗ ಈ ಅಪಘಾತ ಉಂಟಾಗಿದೆ. ಸಣ್ಣಪುಟ್ಟ ಗಾಯದೊಂದಿಗೆ ಎಡಿಸಿ ಸಿ.ಡಿ ಗೀತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING: ಜು.1ರಿಂದ ‘ಆರೋಗ್ಯ ಇಲಾಖೆಯ ನೌಕರ’ರಿಗೆ ‘ಮೊಬೈಲ್ ಆಧಾರಿತ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ