ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಲಾಡ್ಜ್ ನಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಕೋಳೂರು ತಾಂಡಾದ ಅನಿಲ್ ಜಾಧವ, ಲಾಡ್ಜ್ ಮ್ಯಾನೇಜರ್ ಉಡುಪಿ ಜಿಲ್ಲೆ ಕಾರ್ಕಳದ ರಘುನಾಥ ಶೆಟ್ಟಿ, ಕಾಪು ತಾಲ್ಲೂಕಿನ ದಿನೇಶ ಶೆಟ್ಟಿ, ಚಿಕ್ಕಮಗಳೂರಿನ ಗೌತಮ, ಯಾದಗಿರಿ ಜಿಲ್ಲೆ ಹುಣಸಗಿಯ ಭೀಮರಾಯ ಬೂದಿಹಾಳ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.