ಉತ್ತರಾಖಂಡ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಇದುವರೆಗೂ 274 ಜನರು ಸಾವನಪ್ಪಿದ್ದಾರೆ. ಈ ಒಂದು ಘಟನೆ ಮಾಸುವ ಮುನ್ನವೆ ಮತ್ತೊಂದು ದುರಂತ ಸಂಭವಿಸಿದ್ದು ಉತ್ತರಾಖಂಡ್ ನಲ್ಲಿ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕ್ಯಾಪ್ಟರ್ ಒಂದು ಪತನವಾಗಿದೆ.
ಉತ್ತರಾಖಾಂಡನ ಕೇದಾರನಾಥದ ಬಳಿ ಗೌರಿ ಕೊಂಡ ಅರಣ್ಯದಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್ ನಲ್ಲಿ ಪೈಲಟ್ ಓರ್ವ ಮಗು ಸೇರಿದಂತೆ 7 ಜನರು ಪ್ರಯಾಣಿಸುತ್ತಿದ್ದರು ಎಂದು ಮಾಹಿತಿ ತಿಳಿದು ಬಂದಿದೆ. ಘಟನೆಯಲ್ಲಿ ಎಲ್ಲರೂ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.