ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೊಚ್ಚಲ ಕಪ್ ಎತ್ತಿ ಹಿಡಿದ ಆರ್ಸಿಬಿ ತಂಡ ಇತ್ತೀಚಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಒಂದನ್ನು ಹಮ್ಮಿಕೊಂಡಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಕಲ್ತುಡಿದ ನಡೆದು 11 ಜನ ಆರ್ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು.
ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಇನ್ನು ಮುಂದೆ ಯಾವುದೇ ಸಭೆ ಸಮಾರಂಭ ಅಥವಾ ಲಕ್ಷಾಂತರ ಜನರು ಸೇರುವ ಕಾರ್ಯಕ್ರಮಗಳಿಗೆ ಹೊಸ ಕಾನೂನು ಜಾರಿಗೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಇನ್ಮುಂದೆ ನಡೆಯುವ ಸಭೆ ಸಮಾರಂಭಗಳಲ್ಲಿ ಕಾಲ್ತುಳಿತ ಘಟನೆಗಳು ಏನಾದರೂ ಸಂಭವಿಸಿದರೆ, ಮೂರು ವರ್ಷ ರೈಲು ಹಾಗೂ 5 ಲಕ್ಷ ದಂಡ ವಿಧಿಸುವ ಕಾನೂನು ಜಾರಿಗೆ ಸರ್ಕಾರ ನಿರ್ಧರಿಸಿದೆ.
ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟ ಬೆನ್ನಲ್ಲೆ, ಬೃಹತ್ ರಾಜಕೀಯ ರ್ಯಾಲಿ, ದೊಡ್ಡ ಸಮಾವೇಶ, ಸಾಮೂಹಿಕ ಸಮಾರಂಭಗಳಿಗೆ ಸೇರುವ ಜನಸಾಗರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ, ನಿಯಂತ್ರಿಸುವ ಉದ್ದೇಶದಿಂದ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಾನೂನು ರೂಪಿಸುವ ಉದ್ದೇಶದಿಂದ ಕಾನೂನು ಮತ್ತು ಸಂಸದೀಯ ಇಲಾಖೆಯು ‘ಕರ್ನಾಟಕ ಜನಸಂದಣಿ ನಿಯಂತ್ರಣ (ಸಾಮೂಹಿಕ ಸಭೆ, ಕಾರ್ಯಕ್ರಮಗಳು ಮತ್ತು ಸ್ಥಳಗಳಲ್ಲಿ ಜನಸಂದಣಿ ನಿರ್ವಹಣೆ) ಮಸೂದೆ- 2025’ರ ಕರಡು ಸಿದ್ಧಪಡಿಸಿದೆ. .ಮುಂದಿನ ಅಧಿವೇಶನದಲ್ಲಿ ಆಡಳಿತ ಇಲಾಖೆಯಾದ ಗೃಹ ಇಲಾಖೆಯು ಈ ಮಸೂದೆಯನ್ನು ಮಂಡಿಸಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಈ ಕಾನೂನು ಜಾರಿಗೆ ಬಂದರೆ, ಬೃಹತ್ ಕಾರ್ಯಕ್ರಮ ಆಯೋಜಿಸಿ ಕಾಲ್ತುಳಿದಂಥ ಘಟನೆ ಸಂಭವಿಸಿ ಸಾವುನೋವು, ದೈಹಿಕವಾಗಿ ಗಾಯಕ್ಕೆ ಕಾರಣರಾದರೆ, ಕಾರ್ಯಕ್ರಮಗಳ ಆಯೋಜಕರು ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಅಲ್ಲದೆ, 5 ಲಕ್ಷ ರೂ.ದಂಡ ಕಟ್ಟಬೇಕಾಗುತ್ತದೆ. ಜತೆಗೆ, ಇಂತಹ ಘಟನೆಯು ಜಾಮೀನುರಹಿತ ಪ್ರಕರಣ ಎಂದು ಪರಿಗಣಿಸಲು ಮತ್ತು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ವಿಚಾರಣೆಗೆ ಒಳಪಡಿಸಲು ಉದ್ದೇಶಿತ ಕಾನೂನು ಅವಕಾಶ ಕಲ್ಪಿಸಲಿದೆ