ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಂಗಳೂರು ಶೃಂಗೇರಿ ರಸ್ತೆಯಲ್ಲಿ ಗುಡ್ಡ ನಿರಂತರವಾಗಿ ಕುಸಿಯುತ್ತಿದೆ. ಈ ಹಿನ್ನೆಲೆ ರಸ್ತೆ ತುಂಬೆಲ್ಲ ಮಣ್ಣು, ಮರಗಳು ಹಾಗೂ ಕಲ್ಲು ಬಂಡೆಗಳು ಬಿದ್ದಿದ್ದು, ಶೃಂಗೇರಿ ಮಂಗಳೂರು ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಹಾಗಾಗಿ ಈ ರಸ್ತೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ವಾಹನಗಳ ಸಂಚಾರವನ್ನು ನಿಷೇಧಿಸಿದೆ.
ಹೌದು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಶೃಂಗೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಇಂದು ಬೆಳಿಗ್ಗೆ 8 ರವರೆಗೆ ಸಂಚಾರ ನಿಷೇಧಿಸಿರುವ ಚಿಕ್ಕಮಂಗಳೂರು ಜಿಲ್ಲಾ ಆಡಳಿತ. ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ಮಣ್ಣು ನಿರಂತರವಾಗಿ ಕುಸಿಯುತ್ತಿದೆ.
ಸುಮಾರು 40 ಅಡಿ ಎತ್ತರದಿಂದ ರಸ್ತೆಗೆ ಮಣ್ಣು ಅಡ್ಡ ಬೀಳುತ್ತಿದ್ದು, ಮರ ಬಂಡೆಗಳು ಸಹ ರಸ್ತೆಗೆ ಬಿದ್ದಿವೆ. ಮಂಜಾಗ್ರಹ ಕ್ರಮವಾಗಿ ಜಿಲ್ಲಾಡಳಿತದಿಂದ ವಾಹನ ಸಂಚಾರ ನಿಷೇಧಿಸಲಾಗಿದೆ. ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಬಿದರಗೋಡು, ಆಗುಂಬೆ, ಉಡುಪಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚಿಸಲಾಗಿದೆ.