Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಅಧಿಕಾರದಲ್ಲಿದ್ದಾಗ ಸಾರಿಗೆ ನೌಕರರಿಗೆ ಮಾಡಿದ ದ್ರೋಹ ನೆನಪು ಮಾಡಿಕೊಳ್ಳಿ: ಆರ್. ಅಶೋಕ್ ಗೆ CM ಸಿದ್ಧರಾಮಯ್ಯ ತರಾಟೆ

05/08/2025 7:03 PM

ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು

05/08/2025 7:02 PM

ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್

05/08/2025 6:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘KUWS’ ಅಧ್ಯಕ್ಷ ಸ್ಥಾನದಿಂದ ಶಾಸಕ ವಿನಯ್ ಕುಲಕರ್ಣಿಯನ್ನು ತೆಗೆದುಹಾಕುವಂತೆ ಸಿಎಂಗೆ ಆಗ್ರಹ
KARNATAKA

BIG NEWS : ‘KUWS’ ಅಧ್ಯಕ್ಷ ಸ್ಥಾನದಿಂದ ಶಾಸಕ ವಿನಯ್ ಕುಲಕರ್ಣಿಯನ್ನು ತೆಗೆದುಹಾಕುವಂತೆ ಸಿಎಂಗೆ ಆಗ್ರಹ

By kannadanewsnow0516/06/2025 10:23 AM

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ ಬಂಧಿಸಲ್ಪಟ್ಟು ಸೆರೆಮನೆಗೆ ಹೋಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಿರುವ ಅಧ್ಯಕ್ಷ ಸ್ಥಾನದಿಂದ ಕೂಡಲೇ ತೆಗೆದು ಹಾಕುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎನ್.ರಮೇಶ್ ಕುಮಾರ್ ಅವರು ಪತ್ರ ಬರೆದು ಆಗ್ರಹಿಸಿದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಯ ಅಧ್ಯಕ್ಷರಾಗಿರುವ ಮತ್ತು ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿನಯ್ ಕುಲಕರ್ಣಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಡೆ ಇದ್ದವರನ್ನು ಸರ್ವೋಚ್ಛ ನ್ಯಾಯಾಲಯವು ಅವರ ಜಾಮೀನನ್ನು ರದ್ದುಗೊಳಿಸಿ, ಕೂಡಲೇ ಒಂದು ವಾರದೊಳಗೆ CBI ಪೋಲೀಸರ ಎದಿರು ಶರಣಾಗುವಂತೆ ಆದೇಶ ಮಾಡಿರುವುದು ಸರಿಯಷ್ಟೇ.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ವಿನಯ್ ಕುಲಕರ್ಣಿ ಅವರು ದಿನಾಂಕ 12/06/2025 ರ ಗುರುವಾರದಂದು ಬೆಂಗಳೂರಿನ “ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ”ಕ್ಕೆ ಹಾಜರಾದ ನಂತರ, ನ್ಯಾಯಾಲಯವು ಅವರನ್ನು CBI ವಶಕ್ಕೆ ನೀಡಿ ಆದೇಶ ಹೊರಡಿಸಿರುತ್ತದೆ.ಈ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗಿದ್ದ “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಯ ಅಧ್ಯಕ್ಷ ಸ್ಥಾನಕ್ಕೆ ಅವರು ಕಾನೂನು ರೀತ್ಯಾ ಅರ್ಹರಾಗಿರುವುದಿಲ್ಲ.

ಆದುದರಿಂದ, ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಸಂಪುಟ ದರ್ಜೆಯ ಸ್ಥಾನಮಾನವನ್ನು ಹೊಂದಿದ್ದ “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಯ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕುವ ಸಂಬಂಧ ಕೂಡಲೇ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಆಗ್ರಹಿಸಲಾಗಿದೆ.

ಅಲ್ಲದೇ, “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಯಲ್ಲಿ ಬೃಹತ್ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದ್ದು, ಈಗಾಗಲೇ ಕೇಂದ್ರ ಸರ್ಕಾರದ “AMRUT ಯೋಜನೆ”ಅಡಿಯಲ್ಲಿ 2023-24 ಮತ್ತು 2024-25 ರ ಅವಧಿಯಲ್ಲಿ ಬಿಡುಗಡೆಯಾದ ₹ 17,000 ಕೋಟಿ ರೂಪಾಯಿಗಳಷ್ಟು ಬೃಹತ್ ಮೊತ್ತದ ಅನುದಾನವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿರುವ ಹಗರಣ ಬಯಲಾಗಿದ್ದು, ಸುಮಾರು 7280 ಪುಟಗಳ ದಾಖಲೆಗಳ ಸಹಿತ ನಾನು ನೀಡಿದ್ದ ದೂರಿನನ್ವಯ ಜಾರಿ ನಿದೇಶನಾಲಯವು ಪ್ರಕರಣವನ್ನು ದಾಖಲಿಸಿಕೊಂಡು ಈ ಹಗರಣದ ತನಿಖೆಯನ್ನು ನಡೆಸುತ್ತಿರುತ್ತದೆ.

ಬೆಂಗಳೂರು ಮಹಾನಗರವನ್ನು ಹೊರತುಪಡಿಸಿ ರಾಜ್ಯದ ಇನ್ನುಳಿದ ನಗರಗಳ ವ್ಯಾಪ್ತಿಯನ್ನು ಹೊಂದಿರುವ “ನಗರಾಭಿವೃದ್ಧಿ ಇಲಾಖೆ”ಯ ಅಧೀನದಲ್ಲಿ ಬರುವಂತಹ “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಮತ್ತು “ಪೌರಾಡಳಿತ ಇಲಾಖೆ”ಗಳಲ್ಲಿ ಹಿಂದೆಂದೂ ಕಾಣದಂತಹ ದೊಡ್ಡ ಮಟ್ಟದ ಭ್ರಷ್ಟಾಚಾರಗಳು ನಡೆಯುತ್ತಿರುವುದು ಬಹಿರಂಗ ಸತ್ಯವಾಗಿರುತ್ತದೆ.ಮೇಲೆ ತಿಳಿಸಿರುವ ಇಲಾಖೆಗಳಲ್ಲಿ ರಾಜ್ಯದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು, ಪೌರಾಡಳಿತ ಇಲಾಖೆಯ ಸಚಿವ ರಹೀಂ ಖಾನ್ ಅವರು ಮತ್ತು “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಯ ಅಧ್ಯಕ್ಷರಾದ ವಿನಯ್ ಕುಲಕರ್ಣಿ ಅವರು ಟೆಂಡರ್ ಪ್ರಕ್ರಿಯೆಗಳಲ್ಲಿ ಬೃಹತ್ ಮಟ್ಟದ ಭ್ರಷ್ಟಾಚಾರಗಳನ್ನು ನಡೆಸುತ್ತಿರುತ್ತಾರೆ.

ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಭೈರತಿ ಸುರೇಶ್ ಅವರು ಶೇ. 12% ರಷ್ಟು ಕಮಿಷನ್ ಹಣವನ್ನು, ಪೌರಾಡಳಿತ ಇಲಾಖೆಯ ಸಚಿವರಾದ ರಹೀಂ ಖಾನ್ ಅವರು ಶೇ. 5% ರಷ್ಟು ಕಮಿಷನ್ ಹಣವನ್ನು ಮತ್ತು “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ” (KUWS & DB) ಯ ಅಧ್ಯಕ್ಷರಾದ ವಿನಯ್ ಕುಲಕರ್ಣಿ ಅವರು ಶೇ. 5% ರಷ್ಟು ಕಮಿಷನ್ ಹಣವನ್ನು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶೇ. 20% ರಿಂದ 25% ರಷ್ಟು ಕಮಿಷನ್ ಹಣವನ್ನು ಪ್ರತಿಯೊಂದು ಟೆಂಡರ್ ಪ್ರಕ್ರಿಯೆಯಲ್ಲಿ ಪಡೆಯುತ್ತಿದ್ದು, ಈ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳಲ್ಲಿ ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಬಹಳಷ್ಟು ಗುತ್ತಿಗೆದಾರರು ಭೈರತಿ ಸುರೇಶ್, ರಹೀಂ ಖಾನ್ ಮತ್ತು ವಿನಯ್ ಕುಲಕರ್ಣಿ ಅವರ ಬಗ್ಗೆ ಬಹಿರಂಗವಾಗಿಯೇ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಆದ ಕಾರಣ ಸಿದ್ಧರಾಮಯ್ಯನವರ ಕಟ್ಟಾ ಬೆಂಬಲಿಗರಾಗಿರುವ ಭೈರತಿ ಸುರೇಶ್, ರಹೀಂ ಖಾನ್ ರವರುಗಳಿಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಮುಂದಿನ ದಿನಗಳಲ್ಲಿ ಭ್ರಷ್ಟಾಚಾರಗಳಲ್ಲಿ ಅಥವಾ ಟೆಂಡರ್ ಪ್ರಕ್ರಿಯೆಗಳಲ್ಲಿ ಕಮಿಷನ್ ಪಡೆಯದಂತೆ ತಿಳುವಳಿಕೆ ಹೇಳಬೇಕೆಂದು ಹಾಗೂ ಈಗಾಗಲೇ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ CBI ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲ್ಪಟ್ಟಿರುವ ವಿನಯ್ ಕುಲಕರ್ಣಿ ಅವರನ್ನು ಕಾನೂನು ರೀತ್ಯಾ ಕೂಡಲೇ “ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಯ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕುವ ಸಂಬಂಧ ಕ್ರಮ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಆಗ್ರಹಿಸಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ಅಧಿಕಾರದಲ್ಲಿದ್ದಾಗ ಸಾರಿಗೆ ನೌಕರರಿಗೆ ಮಾಡಿದ ದ್ರೋಹ ನೆನಪು ಮಾಡಿಕೊಳ್ಳಿ: ಆರ್. ಅಶೋಕ್ ಗೆ CM ಸಿದ್ಧರಾಮಯ್ಯ ತರಾಟೆ

05/08/2025 7:03 PM2 Mins Read

ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು

05/08/2025 7:02 PM1 Min Read

ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್

05/08/2025 6:56 PM1 Min Read
Recent News

BIG NEWS : ಅಧಿಕಾರದಲ್ಲಿದ್ದಾಗ ಸಾರಿಗೆ ನೌಕರರಿಗೆ ಮಾಡಿದ ದ್ರೋಹ ನೆನಪು ಮಾಡಿಕೊಳ್ಳಿ: ಆರ್. ಅಶೋಕ್ ಗೆ CM ಸಿದ್ಧರಾಮಯ್ಯ ತರಾಟೆ

05/08/2025 7:03 PM

ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು

05/08/2025 7:02 PM

ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್

05/08/2025 6:56 PM

ಸಾಗರ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಯನ ಪ್ರವಾಸಕ್ಕೆ ಅಪಸ್ವರ: ಒಲ್ಲೆಯೆಂದ ಆಡಳಿತ ಪಕ್ಷದ ಸದಸ್ಯರು

05/08/2025 6:49 PM
State News
KARNATAKA

BIG NEWS : ಅಧಿಕಾರದಲ್ಲಿದ್ದಾಗ ಸಾರಿಗೆ ನೌಕರರಿಗೆ ಮಾಡಿದ ದ್ರೋಹ ನೆನಪು ಮಾಡಿಕೊಳ್ಳಿ: ಆರ್. ಅಶೋಕ್ ಗೆ CM ಸಿದ್ಧರಾಮಯ್ಯ ತರಾಟೆ

By kannadanewsnow5705/08/2025 7:03 PM KARNATAKA 2 Mins Read

ಬೆಂಗಳೂರು: ಸಾರಿಗೆ ನೌಕರರ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಅಧಿಕಾರ…

ನವೆಂಬರ್ ನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸುವರ್ಣ ಮಹೋತ್ಸವ: ಶಾಸಕ ಗೋಪಾಲಕೃಷ್ಣ ಬೇಳೂರು

05/08/2025 7:02 PM

ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್

05/08/2025 6:56 PM

ಸಾಗರ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಯನ ಪ್ರವಾಸಕ್ಕೆ ಅಪಸ್ವರ: ಒಲ್ಲೆಯೆಂದ ಆಡಳಿತ ಪಕ್ಷದ ಸದಸ್ಯರು

05/08/2025 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.