ನವದೆಹಲಿ: ಪರ್ಷಿಯನ್ ಕೊಲ್ಲಿ ರಾಷ್ಟ್ರ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದಂತೆ ಭಾರತವು ಇರಾನ್ನಿಂದ ಅರ್ಮೇನಿಯಾ ಮೂಲಕ ತನ್ನ ನಾಗರಿಕರನ್ನು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ನವದೆಹಲಿಯು ತನ್ನ ಭಾರತೀಯ ನಾಗರಿಕರನ್ನು ಇಸ್ರೇಲ್ನಿಂದ ಸ್ಥಳಾಂತರಿಸುವ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.ಇದು ಯುದ್ಧದ ಯುಗವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ, ಇರಾನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಸೆಪ್ಟೆಂಬರ್ 2022 ರ ಸಂದೇಶವನ್ನು ಪುನರುಚ್ಚರಿಸಿದ್ದಾರೆ.
ಇರಾನ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ, ಯುದ್ಧ ಮುಂದುವರೆದಿರುವ ಹಿನ್ನೆಲೆಯಲ್ಲಿ ಉಭಯ ದೇಶಗಳಿಂದ ಭಾರತೀಯರನ್ನು ಸ್ಥಳಾಂತರಿಸಲಾಗುತ್ತಿದೆ. ಈ ನಡುವೆ ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಹಾಯವಾಣಿ ತೆರೆದಿದೆ. ಇರಾನ್ ನಲ್ಲಿರುವ ಭಾರತೀಯರಿಗಾಗಿ ರಾಯಭಾರ ಕಚೇರಿ ಹೆಲ್ಪ್ ಲೈನ್ ಓಪನ್ ಮಾಡಿದೆ. ಸಹಾಯವಾಣಿ ಸಂಖ್ಯೆ + 989010144557, +989128109115, +989128109109 ಈ ಸಂಖ್ಯೆಗೆ ಕರೆ ಮಾಡಲು ಸೂಚಿಸಲಾಗಿದೆ. ಭಾರತೀಯರು ತಮ್ಮ ಸ್ಥಳ, ಸಂಪರ್ಕ ಸಂಖ್ಯೆ ಒದಗಿಸುವಂತೆ ರಾಯಭಾರ ಕಚೇರಿ ತಿಳಿಸಿದೆ.