ಬೆಳಗಾವಿ : ಬೆಳಗಾವಿಯಲ್ಲಿ ಒಂದು ವಿಚಿತ್ರವಾದ ಘಟನೆ ನಡೆದಿದ್ದು, ವಿಷಕಾರಿ ಹಾವು ಕಚ್ಚಿಸಿಕೊಂಡ ಬಳಿಕ ರೈತನೋಬ್ಬ ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿರುವ ಘಟನೆ, ಬೆಳಗಾವಿಯಲ್ಲಿ ನಡೆದಿದೆ.
ಹೌದು ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಈ ಒಂದು ಘಟನೆ ನಡೆದಿದ್ದು ಜಮೀನಿನಲ್ಲಿ ಕೆಲಸ ಮಾಡುವಾಗ ರೈತನಿಗೆ ಹಾವು ಕಚ್ಚಿದೆ. ಕೂಡಲೇ ಹಾವನ್ನು ಬಾಟಲಿಯಲ್ಲಿ ಹಾಕಿಕೊಂಡು ರೈತ ಯಲ್ಲಪ್ಪ ಆಸ್ಪತ್ರೆಗೆ ಬಂದಿದ್ದಾನೆ. ರುಸೇಲ್ಸ್ ಎಂಬ ವಿಷಕಾರಿ ಹಾವು ಕಡಿದ ಹಿನ್ನೆಲೆಯಲ್ಲಿ ರೈತನ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿಯ ಬಿಮ್ಸ್ ತುರ್ತು ಚಿಕಿತ್ಸಾ ಘಟಕದಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.