ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚಿನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜೈಲಲ್ಲಿ ಇದ್ದ ಆರೋಪಿ ಐಶ್ವರ್ಯ ಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಹೌದು ಪಿ ಎಮ್ ಎಲ್ ಎ ಪ್ರಕರಣದಲ್ಲಿ ಐಶ್ವರ್ಯ ಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಇದೀಗ ಐಶ್ವರ್ಯ ಗೌಡಳಿಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ಅನುಸೂಚಿತ ಪ್ರಕರಣವಿಲ್ಲದಿದ್ದರು ಇಡಿ ಬಂಧಿಸಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಐಶ್ವರ್ಯ ಗೌಡ ಪರ ವಕೀಲ ಎಸ್ ಸುನಿಲ್ ಕುಮಾರ್ ವಾದಿಸಿದರು. ಹಾಗಾಗಿ ಸೇಷನ್ಸ್ ಕೋರ್ಟ್ ಐಶ್ವರ್ಯ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇದೇ ಒಂದು ಪ್ರಕರಣದಲ್ಲಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಕಮೆಂಟ್ ನೀಡಿದೆ ಕಳೆದ ಜೂನ್ 19ರಂದು ವಿಚಾರಣೆಗೆ ಹಾಜರಾಗಿ ಎಂದು ಸಮನ್ಸ್ ನೀಡಿತ್ತು. ಆದರೆ ಹಲೋ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವುದರಿಂದ ಜೂನ್ 23 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದಾರೆ.