ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ತಾಲೂಕು ಬಾಗೇಪಲ್ಲಿ ಹೆಸರನ್ನು ಬದಲಾಯಿಸಲು ಒತ್ತಾಯ ಕೇಳಿಬಂದಿತ್ತು. ಪಲ್ಲಿ ಎಂದರೆ ತೆಲುಗು ಭಾಷೆಯಲ್ಲಿ ಹಳ್ಳಿ ಎಂದರ್ಥ, ಆದ್ದರಿಂದ ಈ ಹೆಸರನ್ನು ಬದಲಿಸಬೇಕೆಂದು ಅಭಿಯಾನ ಶುರುವಾಗಿತ್ತು.ಹೀಗಾಗಿ ರಾಜ್ಯ ಸರ್ಕಾರವು ಹೆಸರು ಬದಲಿಸಲು ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ನಾಳೆ ಐತಿಹಾಸಿಕ ನಂದಿಗಿರಿಧಾಮದಲ್ಲಿ ಸಂಪುಟ ಸಭೆ
ನಾಳೆ ಐತಿಹಾಸಿಕ ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶ ಬಂದ್ ಮಾಡಲಾಗಿದೆ.
ನಾಳೆ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ.