ಬೆಂಗಳೂರು : ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಇದೀಗ ಮತ್ತೊಂದು ಬಲಿಯಾಗಿದೆ. ವಿದ್ಯುತ್ ಶಾಕ್ ನಿಂದ ವ್ಯಕ್ತಿ ಒಬ್ಬರು ಸಾವನ್ನಪ್ಪಿದ್ದಾರೆ. ವಿದ್ಯುತ್ ದುರಸ್ತಿ ಮಾಡುತ್ತಿದ್ದ ಜಯರಾಮ್ ಎನ್ನುವವರು ಇದೀಗ ಸಾವನಪ್ಪಿದ್ದಾರೆ. ಬೆಂಗಳೂರಿನ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆಯಲ್ಲಿ ಈ ಒಂದು ಘಟನೆ ನಡೆದಿದೆ.
ಬೆಸ್ಕಾಂ ಅಧಿಕಾರಿಗಳಿಂದ ಇದೀಗ ಮತ್ತೊಂದು ಎಡವಟ್ಟು ಸಂಭವಿಸಿದ್ದು, ಪದೇ ಪದೇ ವಿದ್ಯುತ್ ಕೈ ಕೊಟ್ಟಾಗ ಬೆಸ್ಕಾಂ ಸಿಬ್ಬಂದಿಗಳು ಮಾಡಬೇಕಾದ ಅಂತಹ ಕೆಲಸವನ್ನು ಜಯರಾಮ್ ಮಾಡಿದ್ದಾರೆ. ಆದರೆ ಜಯರಾಮ್ ಲೈಟ್ ಕಂಬ ದುರಸ್ತಿ ಮಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆ ಸಂಭಂದ ಸಾರ್ವಜನಿಕರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.