ಬೆಂಗಳೂರು : ಲಂಚ ಪಡೆಯುವ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಲೋಕಾಯುಕ್ತ ಅಧಿಕಾರಿಯೇ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವುದು ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ ತಂದಿದೆ. ಸರ್ಕಾರಿ ನೌಕರರನ್ನು ಬೆದರಿಸಿ ಕೋಟ್ಯಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ ಆರೋಪದ ಮೇಲೆ ಇದೀಗ ಲೋಕಾಯುಕ್ತ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಶ್ರೀನಾಥ್ ಜೋಶಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.
ಹೌದು ಲೋಕಾಯುಕ್ತ ಪೊಲೀಸರಿಂದ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ ಮಾಡಲಾಗಿದೆ. ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಶ್ರೀನಾಥ್ ಜೋಶಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ನೀಡಿದೆ. ಆದರೆ ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಶ್ರೀನಾಥ್ ಜೋಶಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಆಗಿ ಶ್ರೀನಾಜೋಷಿ ಸೇವೆ ಸಲ್ಲಿಸುತ್ತಿದ್ದರು. ನಿರೀಕ್ಷಣಾ ಜಾಮಿನ ಕೋರಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ನಾಳೆ ನಿಗದಿ ಮಾಡಿದೆ. ಇದೆ ವೇಳೆ ಲೋಕಾಯುಕ್ತ ಪೊಲೀಸರಿಗು ನೋಟಿಸ್ ನೀಡಿದೆ.