ಮೈಸೂರು : ಇಂದು ಮೈಸೂರು ಊರಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ತಾಲೂಕಿನ ನಾಗನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಪ್ರಸನ್ನ (64) ಎಂದು ಗುರುತಿಸಲಾಗಿದೆ. ಕುಕ್ಕೆ ಸುಬ್ರಮಣ್ಯ ಮಠದ ನಿಕಟವರ್ತಿಯಾಗಿದ್ದ ಪ್ರಸನ್ನ ಮೈಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳುವಾಗ ಈ ಒಂದು ದುರಂತ ಸಂಭವಿಸಿದೆ. ಪೊಲೀಸರು ಸದ್ಯ ಪ್ರಸನ್ನ ಅವರ ಮೃತದೇಹವನ್ನು ಕೆ.ಆರ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ ಘಟನೆ ಕುರಿತು ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.