ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಆಯ್ಕೆಯಾಗಿದ್ದಾರೆ.
ಇಂದು ಬೆಂಗಳೂರು ಹಾಲು ಒಕ್ಕೂಟ(BAMUL) ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಡಿ.ಕೆ ಸುರೇಶ್ ಆಯ್ಕೆಯಾಗಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಡಿ.ಕೆ ಸುರೇಶ್, ರಾಜಕೀಯದಿಂದ ಹಿನ್ನಡೆ ಅನುಭವಿಸಿದ್ದರು. ಇದೀಗ ವಿಶ್ರಾಂತಿಯ ಬಳಿಕ ಬಮೂಲ್ ಅಧ್ಯಕ್ಷರಾಗಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರೈತರು, ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. ಆ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ. ಅಧ್ಯಕ್ಷನಾಗಿ ರೈತರಿಗೆ ಎಲ್ಲಾ ಅನುಕೂಲ ಮಾಡಿಕೊಡುವಂತ ಕೆಲಸ ಮಾಡುವುದಾಗಿ ತಿಳಿಸಿದರು.
ಅಂದಹಾಗೇ ಬಮೂಲ್ 14 ನಿರ್ದೇಶಕರಲ್ಲಿ ಡಿ.ಕೆ ಸುರೇಶ್ ಸೇರಿದಂತ 11 ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಿದ್ದರು. ಇಂದು ನಿರ್ದೇಶಕ ಸ್ಥಾನದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ‘ಡಾ.ಎಸ್.ಎಂ ಮುತ್ತಯ್ಯ’ ಮಾರ್ಗದರ್ಶನದಲ್ಲಿ ‘ಮಧು’ಗೆ Phd ಪದವಿ
BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ