Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಣ್ವಸ್ತ್ರ ಭೀತಿ: ಇರಾನ್ ದಾಳಿ ನಿರ್ಧಾರಕ್ಕೆ ಟ್ರಂಪ್ 2 ವಾರಗಳ ಗಡುವು

20/06/2025 7:56 AM

BIG NEWS : ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ `ವಿದ್ಯಾಶಕ್ತಿ ಯೋಜನೆ’ : ಮಹತ್ವಾಕಾಂಕ್ಷಿ ಕಾರ್ಯಕ್ರಮ ಅನುಷ್ಠಾನ.!

20/06/2025 7:53 AM

ಸಾರ್ವಜನಿಕರೇ ಗಮನಿಸಿ : ಇಂದು, ನಾಳೆ `ಅಂಚೆ ಕಚೇರಿ’ ಸೇವೆಯಲ್ಲಿ ವ್ಯತ್ಯಯ

20/06/2025 7:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ `ವಿದ್ಯಾಶಕ್ತಿ ಯೋಜನೆ’ : ಮಹತ್ವಾಕಾಂಕ್ಷಿ ಕಾರ್ಯಕ್ರಮ ಅನುಷ್ಠಾನ.!
KARNATAKA

BIG NEWS : ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ `ವಿದ್ಯಾಶಕ್ತಿ ಯೋಜನೆ’ : ಮಹತ್ವಾಕಾಂಕ್ಷಿ ಕಾರ್ಯಕ್ರಮ ಅನುಷ್ಠಾನ.!

By kannadanewsnow5720/06/2025 7:53 AM

ಧಾರವಾಡ : ಜಿಲ್ಲೆಯನ್ನು ಮತ್ತೇ ಶಿಕ್ಷಣ ಕಾಶಿಯನ್ನಾಗಿಸಲು ಕಳೆದ ವರ್ಷದಿಂದ ಆರಂಭಿಸಿರುವ ಮಿಷನ್ ವಿದ್ಯಾಕಾಶಿ ಶೈಕ್ಷಣಿಕ ಸುಧಾರಣೆಯಲ್ಲಿ ಯಶಸ್ಸು ಕಂಡರೂ ಎಸ್.ಎಸ್.ಎಲ್.ಸಿ ಫಲಿತಾಂಶದ ರ್ಯಾಂಕಿಂಗ್ದ್ಲ್ಲಿ ಸ್ವಲ್ಪ ಹಿನ್ನಡೆ ಆಯಿತ್ತು. ಆದರೆ ದೀರ್ಘಕಾಲದಲ್ಲಿ ಮಿಷನ್ ವಿದ್ಯಾಕಾಶಿಯ ಪರಿಣಾಮಕಾರಿ ಬದಲಾವಣೆ, ಪ್ರಯೋಜನೆ, ಸುಧಾರಣೆಗಳು ಎದ್ದು ಕಾಣುತ್ತವೆ. ಈ ಹಿನ್ನಲೆಯಲ್ಲಿ ಪ್ರಸಕ್ತ ವರ್ಷದ ಮಿಷನ್ ವಿದ್ಯಾಕಾಶಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಸುಧಾರಣೆ ಮತ್ತು ಬಲವರ್ಧನೆಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಧಾರವಾಡ ಐಐಐಟಿ ಸಹಯೋಗದಲ್ಲಿ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ 6ನೇ, 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್ಲೈಿನ್ ಮೂಲಕ ಶಾಲೆಯ ಸ್ಮಾರ್ಟ ಬೋರ್ಡಗಳಿಂದ ನೇರ ಪಾಠಗಳನ್ನು ಕಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಇಂದು (ಜೂ.19) ಬೆಳಿಗ್ಗೆ ಧಾರವಾಡ ಐಐಐಟಿ ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮಿಷನ್ ವಿದ್ಯಾಕಾಶಿ ಯೋಜನೆಯಡಿ ವಿದ್ಯಾಶಕ್ತಿ ಕಾರ್ಯಕ್ರಮ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ವಿದ್ಯಾಶಕ್ತಿ ಕಾರ್ಯಕ್ರಮದ ಮೂಲಕ ಈಗಾಗಲೇ ಸ್ಮಾರ್ಟ ಬೋರ್ಡ ಹೊಂದಿರುವ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಧಾರವಾಡ ಐಐಐಟಿ ಸಹಯೋಗದಲ್ಲಿ 6ನೇ, 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಆನ್ಲೈಹನ್ ತರಗತಿಗಳ ಮೂಲಕ ಉಚಿತವಾಗಿ ಮತ್ತು ನೇರವಾಗಿ ಲೈವ್ ಕ್ಲಾಸ್ ಮಾಡಲಾಗುತ್ತದೆ. ಕ್ಲಾಸ್ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳ ಸಂವಹನಕ್ಕೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಳೆದ ಸಾಲಿನಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಡೆಸಿದ ಬೇಸ್ಲೈಿನ್ ಪರೀಕ್ಷೆಯಲ್ಲಿ, ವಿದ್ಯಾರ್ಥಿಗಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳು ಕಠಿಣವಾಗಿದ್ದು ಮತ್ತು ಈ ವಿಷಯಗಳ ಬೇಸಿಕ್ ಅಂಶಗಳು ತಿಳಿದಿರದ ಬಗ್ಗೆ ಕಂಡುಬಂದಿತ್ತು. ಈ ಸಮಸ್ಯೆಯ ಪರಿಹಾರ ಮತ್ತು ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ವಿಶೇಷವಾಗಿ ಗ್ರಾಮೀಣ ಹಾಗೂ ಸ್ಲಂ ವ್ಯಾಪ್ತಿಗೆ ಒಳಪಡುವ ಪ್ರದೇಶದ ಶಾಲೆಗಳ ಮಕ್ಕಳಲ್ಲಿ ಕಠಿಣವೆನಿಸುವ ವಿಷಯಗಳ ಕುರಿತು ಅಗತ್ಯ ಜ್ಞಾನ, ತರಬೇತಿ ಮತ್ತು ಕಲಿಕೆಯನ್ನು ರೂಢಿಗೊಳಿಸುವುದು ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಮುಂದಿನ ಜುಲೈ ತಿಂಗಳಿಂದ ಸ್ಮಾರ್ಟ ಬೋರ್ಡ ಹೊಂದಿರುವ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಐಐಐಟಿ ಧಾರವಾಡ ಅವರ ಸಹಯೋಗ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ಆನ್ಲೈಹನ್ ಮೂಲಕ ಪಾಠ ಪ್ರಾರಂಭವಾಗಲಿದೆ. ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಶೇ. 50 ಕ್ಕಿಂತ ಕಡಿಮೆ ಫಲಿತಾಂಶದ ಶಾಲೆಗಳ ಸಮೀಕ್ಷೆ ಪೂರ್ಣ: ಮಿಷನ್ ವಿದ್ಯಾಕಾಶಿಯಡಿ ಸಾಕಷ್ಟು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾಗಿಯೂ ಜಿಲ್ಲೆಯ 106 ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ. 50 ಕ್ಕಿಂತ ಕಡಿಮೆಯಾಗಿದೆ. ಮತ್ತು ಆರು ಶಾಲೆಗಳು ಶೂನ್ಯ ಫಲಿತಾಂಶ ಪಡೆದಿವೆ. ಈ ಕುರಿತು ಶೈಕ್ಷಣಿಕ ತಂಡಗಳಿಂದ ಆಯಾ ಶಾಲೆಗಳಿಗೆ ಭೇಟಿ ನೀಡಿ, ಫಲಿತಾಂಶ ಕಡಿಮೆಯಾಗಲು ಕಾರಣ ಮತ್ತು ಅಲ್ಲಿನ ಸೌಲಭ್ಯಗಳ ಕುರಿತು ವಿವರ ಸಂಗ್ರಹಿಸಲಾಗಿದೆ. ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿಯನ್ನು ವಿಶ್ಲೇಷಣೆ ಮಾಡುತ್ತಿದ್ದಾರೆ. ಲೋಪ ಕಂಡು ಬಂದಲ್ಲಿ ಶಿಕ್ಷಣ ಇಲಾಖೆಯ ನಿಯಮಾನುಸಾರ ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳು ಮತ್ತು ಶಿಕ್ಷಕರು ಸಕ್ರೀಯವಾಗಿ ಪಾಲ್ಗೋಂಡು, ಮಿಷನ್ ವಿದ್ಯಾಕಾಶಿಯ ಕಾರ್ಯಕ್ರಮಗಳು ಮತ್ತು ಶಾಲಾ ಶಿಕ್ಷಣ ಇಲಾಖೆಯ ಯೋಜನೆಗಳನ್ನು ಯಶಸ್ವಿಯಾಗಿ ಜರುಗಿಸಬೇಕು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಯಿಂದ ಪ್ರತಿ ಶಾಲೆಯ, ಶಿಕ್ಷಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಪರಿಹರಿಸಲಾಗುವುದು. ಶಿಕ್ಷಕರು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಶಿಕ್ಷಕರ ಸಮಸ್ಯೆಗಳ ಕುರಿತು ಚರ್ಚೆ ಮತ್ತು ಸ್ಪಂದನೆ: ನಿರಂತರವಾಗಿ ಶಾಲೆಯಲ್ಲಿ ಇದ್ದು ಮಕ್ಕಳಿಗೆ ನಿಯಮಾನುಸಾರ ಪಾಠ ಮಾಡಲು ಅನುಕೂಲವಾಗುವಂತೆ ಮತ್ತು ಆಡಳಿತಾತ್ಮಕವಾಗಿ ಆಗುತ್ತಿರುವ ಸಮಸ್ಯೆಗಳ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವದಕ್ಕಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ, ಮುಖ್ಯ ಶಿಕ್ಷಕರ, ಮುಖ್ಯೋಪಾಧ್ಯಯರ, ಶಿಕ್ಷಕರನ್ನು ಪ್ರತಿನಿಧಿಸುವಂತೆ ಶೀಘ್ರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಪಂಚಾಯತ ಸಿಇಓ ನೇತೃತ್ವದಲ್ಲಿ ಒಂದು ಸಭೆ ಆಯೋಜಿಸಲಾಗುತ್ತಿದೆ.

ಈ ಸಭೆಯಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಿ, ಪರಿಹಾರಗಳಿಗಾಗಿ ಅವರಿಂದ ಸಲಹೆಗಳನ್ನು ಸಹ ಪಡೆಯಲಾಗುತ್ತದೆ. ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಹಂತದಲ್ಲಿ ಕೈಗೊಳ್ಳಬಹುದಾದ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ನಿರ್ದೇಶನ ನೀಡಲಾಗುತ್ತದೆ. ನೌಕರ ಸ್ನೇಹಿ ಆಡಳಿತದ ಭಾಗವಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಮತ್ತೊಂದು ಅವಕಾಶ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಶಾಲೆಗಳಿಗೆ ಉಸ್ತುವಾರಿ ಸಚಿವರಿಂದ ಸನ್ಮಾನ ಗೌರವ: ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಸಾಧನೆ ಮಾಡಿರುವ ಸರ್ಕಾರಿ ಶಾಲೆಗಳಿಗೆ ಮತ್ತು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರ್ಯಾಂಕ್ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರ, ಮುಖ್ಯೋಪಾಧ್ಯಯರ ಸಭೆ ಜರುಗಿಸಿ, ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಧನೆಗೆ ಮಾರ್ಗದರ್ಶನ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿದ್ಯಾಶಕ್ತಿ ಕಾರ್ಯಕ್ರಮದ ಪ್ರಥಮ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಜಿಲ್ಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಹೆಚ್ಚು ಆಯೋಜಿಸಬೇಕು. ಶಿಕ್ಷಕರು ನಿಗದಿತ ಸಮಯಕ್ಕೆ ಶಾಲೆಗಳಿಗೆ ಹಾಜರಾಗಿ ವೇಳಾಪಟ್ಟಿ ಅನುಸಾರ ವರ್ಗಗಳನ್ನು ತೆಗೆದುಕೊಳ್ಳಬೇಕು. ಕಲಿಸುವಿಕೆಯ ಕುರಿತು ಯಾವುದೇ ನಿರ್ಲಕ್ಷ್ಯ, ಉದಾಸೀನತೆ ತೋರದೆ ಎಲ್ಲರೂ ಪ್ರಾಮಾಣಿಕವಾಗಿ ಈ ಶೈಕ್ಷಣಿಕ ಉತ್ಸವದಲ್ಲಿ ಭಾಗವಹಿಸಬೇಕೆಂದು ಅವರು ಹೇಳಿದರು.

ಐಐಐಟಿ ಯ ನಿರ್ದೇಶಕ ಪ್ರೋ. ಎಸ್.ಆರ್.ಮಹಾದೇವ ಪ್ರಸನ್ನ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶಿವಸುಬ್ರಮಣ್ಯ ಎಸ್. ಅವರು ವಿದ್ಯಾಶಕ್ತಿ ಕಾರ್ಯಕ್ರಮ ಕುರಿತು ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಡಿವಾಯ್ಪಿಮಸಿ ಎಸ್.ಎಂ.ಹುಡೇದಮನಿ ಯೋಜನೆ ಕುರಿತು ಮಾತನಾಡಿದರು. ಕುಲಸಚಿವ ಡಾ.

BIG NEWS: `Vidyashakti Yojana' for educational strengthening of primary and high schools: Implementation of an ambitious program!
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಇಂದು, ನಾಳೆ `ಅಂಚೆ ಕಚೇರಿ’ ಸೇವೆಯಲ್ಲಿ ವ್ಯತ್ಯಯ

20/06/2025 7:50 AM1 Min Read

BREAKING : ಬೆಂಗಳೂರಿನಲ್ಲಿ ಆರತಕ್ಷತೆ ವೇಳೆ ದಾಳಿ ನಡೆಸಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು.!

20/06/2025 7:45 AM1 Min Read

ಯುವನಿಧಿ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ : 3 ತಿಂಗಳಿಗೊಮ್ಮೆ `ಸ್ವಯಂ ಘೋಷಣೆ’ ಸಲ್ಲಿಕೆ ಕಡ್ಡಾಯ

20/06/2025 7:41 AM1 Min Read
Recent News

BREAKING: ಅಣ್ವಸ್ತ್ರ ಭೀತಿ: ಇರಾನ್ ದಾಳಿ ನಿರ್ಧಾರಕ್ಕೆ ಟ್ರಂಪ್ 2 ವಾರಗಳ ಗಡುವು

20/06/2025 7:56 AM

BIG NEWS : ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ `ವಿದ್ಯಾಶಕ್ತಿ ಯೋಜನೆ’ : ಮಹತ್ವಾಕಾಂಕ್ಷಿ ಕಾರ್ಯಕ್ರಮ ಅನುಷ್ಠಾನ.!

20/06/2025 7:53 AM

ಸಾರ್ವಜನಿಕರೇ ಗಮನಿಸಿ : ಇಂದು, ನಾಳೆ `ಅಂಚೆ ಕಚೇರಿ’ ಸೇವೆಯಲ್ಲಿ ವ್ಯತ್ಯಯ

20/06/2025 7:50 AM

ಅಫ್ಘಾನಿಸ್ತಾನದ ಪಶ್ಚಿಮ ಭಾಗದಲ್ಲಿ 4.6 ತೀವ್ರತೆಯ ಭೂಕಂಪ | Earthquake

20/06/2025 7:47 AM
State News
KARNATAKA

BIG NEWS : ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ `ವಿದ್ಯಾಶಕ್ತಿ ಯೋಜನೆ’ : ಮಹತ್ವಾಕಾಂಕ್ಷಿ ಕಾರ್ಯಕ್ರಮ ಅನುಷ್ಠಾನ.!

By kannadanewsnow5720/06/2025 7:53 AM KARNATAKA 3 Mins Read

ಧಾರವಾಡ : ಜಿಲ್ಲೆಯನ್ನು ಮತ್ತೇ ಶಿಕ್ಷಣ ಕಾಶಿಯನ್ನಾಗಿಸಲು ಕಳೆದ ವರ್ಷದಿಂದ ಆರಂಭಿಸಿರುವ ಮಿಷನ್ ವಿದ್ಯಾಕಾಶಿ ಶೈಕ್ಷಣಿಕ ಸುಧಾರಣೆಯಲ್ಲಿ ಯಶಸ್ಸು ಕಂಡರೂ…

ಸಾರ್ವಜನಿಕರೇ ಗಮನಿಸಿ : ಇಂದು, ನಾಳೆ `ಅಂಚೆ ಕಚೇರಿ’ ಸೇವೆಯಲ್ಲಿ ವ್ಯತ್ಯಯ

20/06/2025 7:50 AM

BREAKING : ಬೆಂಗಳೂರಿನಲ್ಲಿ ಆರತಕ್ಷತೆ ವೇಳೆ ದಾಳಿ ನಡೆಸಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು.!

20/06/2025 7:45 AM

ಯುವನಿಧಿ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ : 3 ತಿಂಗಳಿಗೊಮ್ಮೆ `ಸ್ವಯಂ ಘೋಷಣೆ’ ಸಲ್ಲಿಕೆ ಕಡ್ಡಾಯ

20/06/2025 7:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.