ಶಿವಮೊಗ್ಗ : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಬಂಡಿಗುಡ್ಡದ ಬಳಿ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಳೂಕಿನ ಬಂಡಿಗುಡ್ಡ ಗ್ರಾಮದಲ್ಲಿ ಜಮೀನಿನಿಂದ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿಯಿಂದಾಗಿ ಕುಮಾರ್ (50) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚನ್ನಗಿರಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಅರಣ್ಯಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.