ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೈದ್ಯ ದಂಪತಿಯ ಪುತ್ರಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ಯುವತಿ ಸಹ ಇತ್ತೀಚಿಗಷ್ಟೇ ಎಂಬಿಬಿಎಸ್ ಮುಗಿಸಿ ವೈದ್ಯೇಯಾಗಿದ್ದಳು ಎಂದು ತಿಳಿದುಬಂದಿದೆ.
ಇತ್ತೀಚಿಗಷ್ಟೇ ಮೃತ ಡಾ. ಸಾನಾ ವೈದ್ಯೆಯಾಗಿದ್ದರು. ಕಳೆದ ತಿಂಗಳು ಅಷ್ಟೇ ಎಂಬಿಬಿಎಸ್ ಮುಗಿಸಿ ಬಂದಿದ್ದರು. ಶಿವಮೊಗ್ಗದ ಸಿನ್ಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದರು. ಶಿವಮೊಗ್ಗದ ತಾವರೆಕೊಪ್ಪದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲ ನಿವಾಸಿಯಾಗಿರುವ ಸಾನಾ ಈ ಒಂದು ಅಪಘಾತದಲ್ಲಿ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.