ಹೊಸನಗರ : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೋಡೂರಿನಲ್ಲಿ ನಡೆದಿದೆ.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿ ಮೂರು ಕಾರುಗಳು ಶುಕ್ರವಾರ ಸಂಜೆ ಕೋಡೂರು ಬಳಿ ಅಪಘಾತಕ್ಕೀಡಾಗಿದೆ. ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ ಕಾರಿನ ಮುಂದೆ ಜಾನುವಾರು ಅಡ್ಡ ಬಂದ ಕಾರಣ ಅವಘಡ ನಡೆದಿದೆ. ಸರಣಿ ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.
ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಶಾಸಕ ಗಂಟಿಹೊಳೆ ಅವರು ಉಡುಪಿಯತ್ತ ಪ್ರಯಾಣ ಮೊಟಕುಗೊಳಿಸಿ ಮತ್ತೊಂದು ಕಾರಿನಲ್ಲಿ ಬೈಂದೂರಿನ ಕಡೆಗೆ ತೆರಳಿದ್ದಾರೆ ಎನ್ನಲಾಗಿದೆ.