ಬಾಗಲಕೋಟೆ : ಕೇವಲ ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಕಸ್ತ್ರಗಳಿಂದ, ದೊಣ್ಣೆ ಹಾಗೂ ಹಾಕಿ ಸ್ಟಿಕ್ ಗಳಿಂದ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹೊಸಪೇಟೆ ನಗರದಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.
ಹೌದು ಬಾಗಲಕೋಟೆಯಲ್ಲಿ ಎರಡು ಗುಂಪುಗಳ ಮಧ್ಯ ಮಾರಾಮಾರಿ ನಡೆದಿದೆ. ಮಾರಕಾಸ್ತ್ರ, ದೊಣ್ಣೆ ಹಾಗು ಹಾಕಿ ಸ್ಟಿಕ್ ಹಿಡಿದುಕೊಂಡು ಗಲಾಟೆ ಮಾಡಿದ್ದಾರೆ. ರಸ್ತೆಗೆ ಅಡ್ಡಲಾಗಿ ನಿಂತಿದ್ದ ವಾಹನದ ವಿಚಾರವಾಗಿ ಗಲಾಟೆ ನಡೆದಿದೆ. ವಾಹನ ಸೈಡಿಗೆ ಹಾಕಿ ಅಂತ ಹೇಳಿದ್ದಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ.
ಇಳಕಲ್ ನಗರದ ಹೊಸಪೇಟೆ ಗಲ್ಲಿಯಲ್ಲಿ ಈ ಒಂದು ಘಟನೆ ನಡೆದಿದೆ. ದಾದಾಪೀರ್ ಜಕ್ಕಲಿ, ಶಾಮಿದ್ ರೇಷ್ಮೆ, ರಂಜಾನ್ ಬನ್ನು ಎಂಬ ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಇದೀಗ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.