ರಾಯಚೂರು : ಮಾಜಿ ಶಾಸಕರ ಜೇಬಲ್ಲಿದ್ದಂತಹ 70,000 ಹಣದ ಕಂತೆ ಖತರ್ನಾಕ್ ಕಳ್ಳನೊಬ್ಬ ಕದ್ದಿದ್ದಾನೆ. ಸಚಿವ ಎನ್.ಎಸ್ ಬೊಸರಾಜು ಅವರ ಹುಟ್ಟುಹಬ್ಬದ ಹಿನ್ನೆಲೆ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಕೈಚಳಕ ತೋರಿಸಿದ್ದಾನೆ.
ಸಚಿವ ಎನ್ಎಸ್ ಬೋಸರಾಜು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ರಾಯಚೂರು ಕೃಷಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಈ ಒಂದು ಕಾರ್ಯಕ್ರಮ ನಡೆದಿದ್ದು ಲಿಂಗಸುಗೂರು ಕ್ಷೇತ್ರದ ಮಾಜಿ ಶಾಸಕರಾಗಿರುವ ಡಿ ಎಸ್ ಹುಲಗೇರಿಯವರ ಜೇಬು ಕತ್ತರಿಸಿ ಕಳ್ಳನೊಬ್ಬ 70,000 ಹಣದ ಕಂತೆಯನ್ನು ಎಗರಿಸಿದ್ದಾನೆ. ತಕ್ಷಣ ಎಚ್ಚೆತ್ತು ಜೇಬುಗಳ್ಳನಿಗೆ ಧರ್ಮದೇಟು ನೀಡಿದ್ದಾರೆ. ಕಪಾಳ ಮೋಕ್ಷ ಮಾಡಿ ಹಣವನ್ನು ವಾಪಸ್ ಕಿತ್ತುಕೊಂಡಿದ್ದಾರೆ.