ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರು ಇನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಪ್ರಕರಣದ ಕುರಿತು ತನಿಖಾಧಿಕಾರಿಗಳು ಎಲ್ಲಾ ಹೇಳಿಕೆಗಳನ್ನು ದಾಖಲಿಸಿದ್ದು, ನ್ಯಾಯಾಲಯ ವಿಚಾರಣೆಯನ್ನು ಜೂನ್ 28ಕ್ಕೆ ಮುಂದೂಡಿತು.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖಾಧಿಕಾರಿಗಳ ಹೇಳಿಕೆ ದಾಖಲು ಆಗಿದ್ದು, ಇಡೀ ದಿನ ದಾಖಲೆಗಳ ಸಹಿತ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಇದುವರೆಗೂ ಎಲ್ಲಾ ಪ್ರಮುಖ ಸಾಕ್ಷಿಗಳ ಹೇಳಿಕೆಯನ್ನು ರಾಜಕೀಯ ದಾಖಲಿಸಿದೆ. ಎಸ್.ಪಿ.ಪಿ ಜಗದೀಶ್, ಅಶೋಕ್ ನಾಯಕರಿಂದ ಸಾಕ್ಷಿಗಳ ವಿಚಾರಣೆ ನಡೆಯುತ್ತಿದ್ದು, ತನಿಖಾಧಿಕಾರಿಯ ಪಾಟಿ ಸವಾಲಿಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ. ಹಾಗಾಗಿ ಇದೀಗ ವಿಚಾರಣೆಯನ್ನು ಜೂನ್ 28ಕ್ಕೆ ನ್ಯಾಯಾಲಯ ಮುಂದೂಡಿದೆ.