ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ದಾಖಲಿಸಿದ ಮಾನನಷ್ಟ ಮೊಕದ್ದಮೆಯನ್ನು ಕೋರ್ಟ್ ಇದೀಗ ವಜಾಗೊಳಿಸಿದೆ. ಬೆಂಗಳೂರಿನ 42ನೇ ACJM ಕೋರ್ಟ್ ನ ಜಡ್ಜ್ ಕೆ.ಎನ್ ಶಿವಕುಮಾರ್ ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಮುಡಾ ಪ್ರಕರಣ ದಾಖಲಿಸಿದ ಬಳಿಕಟ್ಟಿದೆ ಅಬ್ರಹಾಮ ವಿರುದ್ಧ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ನನ್ನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅಬ್ರಹಾಂ ದೂರು ದಾಖಲಿಸಿದ್ದರು.ಇದೀಗ ಇಂದು ವಿಚಾರಣೆ ನಡೆಸಿದ ಜಡ್ಜ್ ಕೆ.ಎನ್ ಶಿವಕುಮಾರ್ ಅವರು CM ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸಿ ಆದೇಶಿಸಿದರು.