ಮಂಗಳೂರು : ಗ್ಯಾಸ್ ಟ್ಯಾಂಕರ್ ಗೆ KSRTC ಬಸ್ ಡಿಕ್ಕಿಯಾಗಿ 30 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲಶಪುರ ತಾಲೂಕಿನ ಮಾರನಹಳ್ಳಿ ಎಂಬಲ್ಲಿ ನಡೆದಿದೆ. 30 ಪ್ರಯಾಣಿಕರಿಗೆ ಗಾಯಗಳಾಗಿದ್ದು 10ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
ಸಕಲೇಶಪುರದಿಂದ ಕೆಎಸ್ಆರ್ಟಿಸಿ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಮಂಗಳೂರು ಕಡೆಯಿಂದ ಗ್ಯಾಸ್ ಟ್ಯಾಂಕರ್ ಬೆಂಗಳೂರು ಕಡೆಗೆ ಬರುವಾಗ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾದ ಗಾಯಗೊಂಡವರನ್ನು ಹಾಸನ ಮತ್ತು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಗಾಯಾಲುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.