ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ‘ಸಂಧ್ಯಾ ಕಿರಣ’ ಯೋಜನೆಯಡಿ ಪ್ರಾಯೋಗಿಕವಾಗಿ ಜಾರಿ ಮಾಡಿರುವ ನಗದು ರಹಿತ ಚಿಕಿತ್ಸೆ ಸೌಲಭ್ಯವನ್ನು ಎಲ್ಲ ಕಡೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದರು.
ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗಾಗಿ ಸಂಧ್ಯಾ ಕಿರಣ ಯೋಜನೆ ಜಾರಿಗೊಳಿಸಲಾಗಿದೆ. ನಗದು ರಹಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾಯೋಗಿಕವಾಗಿ ನಡೆಸುತ್ತಿದ್ದು, ಇದು ಯಶಸ್ವಿಯದಲ್ಲಿ ಎಲ್ಲಾ ಕಡೆಗೆ ವಿಸ್ತರಿಸುವುದಾಗಿ ತಿಳಿಸಿದ್ದಾರೆ
ನಿವೃತ್ತ ನೌಕರರ ಆರೋಗ್ಯ ಸುರಕ್ಷತೆಗಾಗಿ ‘ಸಂಧ್ಯಾ ಕಿರಣ’ ಯೋಜನೆ ಜಾರಿಯಲ್ಲಿದೆ. ಚಿಕಿತ್ಸೆ ಪಡೆದು ಬಿಲ್ಗಳು ಸಲ್ಲಿಸಿದ ಬಳಿಕ ಮರುಪಾವತಿ ವ್ಯವಸ್ಥೆ ಇದೆ. ಇದನ್ನು ನಗದು ರಹಿತ ಮಾಡುವ ಉದ್ದೇಶದಿಂದ ಪ್ರಾಯೋಗಿಕ ಜಾರಿಗೆ ಸೂಚನೆ ನೀಡಲಾಗಿದೆ. ಮರುಪಾವತಿಗೂ ಮತ್ತು ನಗದು ರಹಿತ ಸೇವೆ ನೀಡಿದ ಆಸ್ಪತ್ರೆಗಳ ಪಾವತಿ ವ್ಯತ್ಯಾಸವನ್ನು ಗಮನಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಅವರು ಹೇಳಿದರು.