Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ಮತ್ತೆ ‘ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025’ ದಿನಾಂಕ ವಿಸ್ತರಣೆ

22/06/2025 8:12 PM

BREAKING : ರಾಜ್ಯದಲ್ಲಿ ‘ಕರಾಳ ರವಿವಾರ’ : ಇಂದು ಒಂದೇ ದಿನ 11 ಜನ ಜಲಸಮಾಧಿ!

22/06/2025 8:05 PM

SHOCKING : ಹಾಸನದಲ್ಲಿ ಘೋರ ದುರಂತ : ಇಂದು ಒಂದೇ ಇಬ್ಬರು ‘ಹೃದಯಾಘಾತಕ್ಕೆ’ ಬಲಿ

22/06/2025 7:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ‘ಕರಾಳ ರವಿವಾರ’ : ಇಂದು ಒಂದೇ ದಿನ 11 ಜನ ಜಲಸಮಾಧಿ!
KARNATAKA

BREAKING : ರಾಜ್ಯದಲ್ಲಿ ‘ಕರಾಳ ರವಿವಾರ’ : ಇಂದು ಒಂದೇ ದಿನ 11 ಜನ ಜಲಸಮಾಧಿ!

By kannadanewsnow0522/06/2025 8:05 PM

ಬೆಂಗಳೂರು : ರಾಜ್ಯಕ್ಕೆ ಇಂದು ಕರಾಳ ರವಿವಾರ ಎಂದು ಹೇಳಿದರೆ ತಪ್ಪಾಗಲಿಕ್ಕಿಲ್ಲ. ಏಕೆಂದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ನದಿ ಕೆರೆ ಹಳ್ಳಗಳು ತುಂಬಿ ಹರಿಯುತ್ತಿವೆ. ಇದೇ ಸಂದರ್ಭದಲ್ಲಿ ಜನರು ತಮ್ಮ ಪ್ರಾಣದ ಹಂಗನ್ನು ತೊರೆದು, ಜಲಪಾತ ನದಿಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೀಗ ಇಂದು ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 11 ಜನರು ಜಲಸಮಾಧಿಯಾಗಿದ್ದಾರೆ.

ಮೊದಲನೇದಾಗಿ ಶಿವಮೊಗ್ಗದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಜಮೀನೊಂದರ ಕೃಷಿ ಹೊಂಡಕ್ಕೆ ಯುವಕರಿಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ದಾರುಣ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಮೃತ ಯುವಕರನ್ನು ಯಡವಾಲ ಗ್ರಾಮದ ನಿವಾಸಿ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಬಡಾವಣೆ ನಿವಾಸಿ ಚಿರಂಜೀವಿ (22) ಎಂದು ತಿಳಿದುಬಂದಿದೆ.ಘಟನೆಯಲ್ಲಿ ಹೊಂಡಕ್ಕೆ ಬಿದ್ದಿದ್ದ ಮತ್ತೋರ್ವ ಯುವಕ ಈಜಿ ದಡ ಸೇರಿದ್ದಾನೆ ಎಂದು ತಿಳಿದುಬಂದಿದೆ.

ಮೃತ ಗೌತಮ್ ಅವರ ಕುಟುಂಬಕ್ಕೆ ಸೇರಿದ ತೋಟದ ಪಕ್ಕದ ಜಮೀನೊಂದರ ಬಳಿ ಘಟನೆ ನಡೆದಿದೆ. ರಾತ್ರಿ ಗೌತಮ್ ಸುಮಾರು 10 ಜನ ಸ್ನೇಹಿತರ ಜೊತೆಗೂಡಿ ತೋಟಕ್ಕೆ ಹೋಗಿದ್ದರು. ಈ ವೇಳೆ ಕೃಷಿ ಹೊಂಡದಿಂದ ನೀರು ತರಲು ಹೋದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು ಈತನ ರಕ್ಷಣೆಗೆ ಹೋದ ಮತ್ತೋರ್ವನು ನೀರು ಪಾಲಾಗಿದ್ದಾನೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತಂಡ ಆಗಮಿಸಿದೆ. ಕೃಷಿ ಹೊಂಡದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಮೃತ ದೇಹಗಳನ್ನು ರವಾನಿಸಲಾಗಿದೆ.ಘಟನೆ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆಯಲ್ಲಿ ಇಬ್ಬರು ದುರ್ಮರಣ

ಬಾಗಲಕೋಟೆಯಲ್ಲೂ ಸಹ ದುರಂತ ನಡೆದಿದ್ದು, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳಗಿ ಇಬ್ಬರು ಮೃತ ಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಿಕನಾಳ ಗ್ರಾಮದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ಮೃತರನ್ನು ಕೊಪ್ಪಳ ಜಿಲ್ಲೆ ಬಳೂಟಗಿ ಗ್ರಾಮದ ನಿವಾಸಿ ಮಂಜುನಾಥ ಬಾಲಪ್ಪ ಬಂಡಿ(13) ಚಿಕನಾಳ ಗ್ರಾಮದ ನಿವಾಸಿ ಷಣ್ಮುಖಪ್ಪ ನಿಲಪ್ಪ ತಿಪ್ಪಣ್ಣವರ (30) ಎಂದು ತಿಳಿದು ಬಂದಿದೆ. ಈ ಸಂಬಂಧ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಳ್ಳದಲ್ಲಿ ಕಾಲು ಜಾರಿ ಬಿದ್ದ ಬಾಲಕನ್ನು ರಕ್ಷಿಸಲು ಹೋಗಿ ಯುವಕ ಕೂಡ ಮೃತಪಟ್ಟಿದ್ದಾನೆ ಎನ್ನಲಾಗಿದೆ. ನೀರುಪಾಲಾದ ಇಬ್ಬರ ಮೃತ ದೇಹವನ್ನು ಹೂರಗೆ ತೆಗೆದು, ಗುಡೂರ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಲಾಗಿದೆ.

ವಿಜಯನಗರದಲ್ಲಿ ಇಬ್ಬರು, ಗದಗದಲ್ಲಿ ಓರ್ವ ವ್ಯಕ್ತಿ ಸಾವು!

ಇನ್ನು ವಿಜಯನಗರ ಜಿಲ್ಲೆಯಲ್ಲೂ ಇಂದು ಚೆಕ್ ಡ್ಯಾಮ್ ನಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದ ಬಳಿ ಚೆಕ್ ಡ್ಯಾಮ್ ನಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಅರವಿಂದ ಮತ್ತು ಹನುಮಂತ ಎಂಬ ಇಬ್ಬರು ಬಾಲಕರು ಡ್ಯಾಮ್ ನಲ್ಲಿ ಈಜಲು ಹೋಗಿ ಸಾವನಪ್ಪಿದ್ದಾರೆ ನೀರಿನ ಸಡತಕ್ಕೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ ಹೊಸಪೇಟೆ ಗ್ರಾಮಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಅದೇ ರೀತಿಯಾಗಿ ಗದಗದಲ್ಲೂ ಘೋರವಾದ ದುರಂತ ನಡೆದಿದ್ದು, ಗದಗದಲ್ಲಿ ಸಿಂಹ ಕೆರೆಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾನೆ. ಗದಗ ನಗರದ ಭೀಷ್ಮ ಕೆರೆಯ ಪಕ್ಕದಲ್ಲಿರುವಂತಹ ಸಿಂಹ ಕೆರೆಯಲ್ಲಿ ಹುಯಿಲಗೊಳ ಗ್ರಾಮದ ವೀರೇಶ ಪತ್ತಾರ ಎಂಬ ವ್ಯಕ್ತಿ ಸಾವನಪ್ಪಿದ್ದಾನೆ. ಕೆರೆಯ ಬಳಿ ವೀರೇಶ್ ಅವರಿಗೆ ಪಿಡ್ಸ್ ಬಂದಿದೆ. ಈ ವೇಳೆ ಅವರು ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೃಷಿ ಹೊಂಡದಲ್ಲಿ ತಾಯಿ-ಮಗಳ ಮೃತದೇಹ ಪತ್ತೆ!

ಇನ್ನು ಬೆಂಗಳೂರಲ್ಲಿ ಕೃಷಿಹೊಂಡದಲ್ಲಿ ತಾಯಿ ಮತ್ತು ಮಗಳ ಶವಗಳು ಪತ್ತೆಯಾಗಿದ್ದು, ಪತಿಯೇ ತನ್ನ ಹೆಂಡತಿ ಮತ್ತು ಮಗಳನ್ನು ಕೊಂದು ಶವಗಳನ್ನು ಕೃಷಿ ಹೊಂಡಕ್ಕೆ ಎಸೆದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಒಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇಂಡ್ರಸನಹಳ್ಳಿ ಎಂಬಲ್ಲಿ ನಡೆದಿದೆ.

ಹೌದು ಅನುಮಾನಾಸ್ಪದ ರೀತಿಯಲ್ಲಿ ಕೃಷಿ ಹೊಂಡದಲ್ಲಿ ತಾಯಿ ಮತ್ತು ಮಗಳ ಮೃತ ದೇಹಗಳು ಪತ್ತೆಯಾಗಿವೆ. ದೇವನಹಳ್ಳಿ ತಾಲೂಕಿನ ಇಂಡ್ರಸನಹಳ್ಳಿ, ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಜಮೀನು ಭಾಗ ಕೇಳಿದ್ದಕ್ಕೆ ಗಂಡನಿಂದಲೇ ತಾಯಿ ಮತ್ತು ಮಗಳ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ಮಾಲ ಮತ್ತು ಮಗಳು ಅನುಶ್ರೀ ಮೃತದೇಹಗಳು ಪತ್ತೆಯಾಗಿವೆ. ಕೊಲೆ ಮಾಡಿ ಕೃಷಿ ಹೊಂಡಕ್ಕೆ ಎಸೆದಿರುವ ಆರೋಪ ಕೇಳಿ ಬರುತ್ತಿದೆ.ಮಗಳನ್ನು ಕಳೆದುಕೊಂಡು ಇದೀಗ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಮತ್ತೆ ‘ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025’ ದಿನಾಂಕ ವಿಸ್ತರಣೆ

22/06/2025 8:12 PM1 Min Read

SHOCKING : ಹಾಸನದಲ್ಲಿ ಘೋರ ದುರಂತ : ಇಂದು ಒಂದೇ ಇಬ್ಬರು ‘ಹೃದಯಾಘಾತಕ್ಕೆ’ ಬಲಿ

22/06/2025 7:39 PM2 Mins Read

ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ಇನ್ನಿಲ್ಲ

22/06/2025 7:17 PM3 Mins Read
Recent News

ರಾಜ್ಯ ಸರ್ಕಾರದಿಂದ ಮತ್ತೆ ‘ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025’ ದಿನಾಂಕ ವಿಸ್ತರಣೆ

22/06/2025 8:12 PM

BREAKING : ರಾಜ್ಯದಲ್ಲಿ ‘ಕರಾಳ ರವಿವಾರ’ : ಇಂದು ಒಂದೇ ದಿನ 11 ಜನ ಜಲಸಮಾಧಿ!

22/06/2025 8:05 PM

SHOCKING : ಹಾಸನದಲ್ಲಿ ಘೋರ ದುರಂತ : ಇಂದು ಒಂದೇ ಇಬ್ಬರು ‘ಹೃದಯಾಘಾತಕ್ಕೆ’ ಬಲಿ

22/06/2025 7:39 PM

ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ಇನ್ನಿಲ್ಲ

22/06/2025 7:17 PM
State News
KARNATAKA

ರಾಜ್ಯ ಸರ್ಕಾರದಿಂದ ಮತ್ತೆ ‘ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025’ ದಿನಾಂಕ ವಿಸ್ತರಣೆ

By kannadanewsnow0922/06/2025 8:12 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ಅಂತಿಮವಾಗಿ ದಿನಾಂಕವನ್ನು ವಿಸ್ತರಿಸಿ ಆದೇಶಿಸಿದೆ. ಆದೇಶದಂತೆ ಜೂನ್ 30ರವರೆಗೆ ವಿಸ್ತರಣೆ…

BREAKING : ರಾಜ್ಯದಲ್ಲಿ ‘ಕರಾಳ ರವಿವಾರ’ : ಇಂದು ಒಂದೇ ದಿನ 11 ಜನ ಜಲಸಮಾಧಿ!

22/06/2025 8:05 PM

SHOCKING : ಹಾಸನದಲ್ಲಿ ಘೋರ ದುರಂತ : ಇಂದು ಒಂದೇ ಇಬ್ಬರು ‘ಹೃದಯಾಘಾತಕ್ಕೆ’ ಬಲಿ

22/06/2025 7:39 PM

ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ಇನ್ನಿಲ್ಲ

22/06/2025 7:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.