Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯರ ಮೇಲೆ ಹರಿದ ಬಸ್ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

23/06/2025 10:17 AM

‘ಭಾರತೀಯ ರಿಯಲ್ ಎಸ್ಟೇಟ್ನಲ್ಲಿ 90% ಖರೀದಿದಾರರು ಹಣವನ್ನು ಕಳೆದುಕೊಳ್ಳುತ್ತಾರೆ’: ವರದಿ

23/06/2025 10:15 AM

BIG NEWS : ಛೆ..ಇದೆಂತಾ ವಿಕೃತಿ : ಮಂಡ್ಯದಲ್ಲಿ ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲೆ ಬಿಟ್ಟು ಹೋದ ಪಾಪಿ ಮಗ!

23/06/2025 10:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!
KARNATAKA

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

By kannadanewsnow5723/06/2025 10:04 AM

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಲ್ಲ. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://dbcdo.karnataka.gov.in ರಲ್ಲಿ ಸಂಪರ್ಕಿಸುವುದು.

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ

ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು.

ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.

ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.

ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು.

ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಸ್ವಂತ ಜಮೀನಿನ ಪಹಣಿ

ಅರ್ಜಿದಾರರ ಭಾವಚಿತ್ರ

ಬಿಪಿಎಲ್ ರೇಷನ್ ಕಾರ್ಡ್

ಮೊಬೈಲ್ ಸಂಖ್ಯೆ

ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

BIG NEWS: Attention to the people of the state: June 30 is the last day to apply for various schemes including `Ganga Kalyana' Swavalambi Sarathi'
Share. Facebook Twitter LinkedIn WhatsApp Email

Related Posts

BIG NEWS : ಛೆ..ಇದೆಂತಾ ವಿಕೃತಿ : ಮಂಡ್ಯದಲ್ಲಿ ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲೆ ಬಿಟ್ಟು ಹೋದ ಪಾಪಿ ಮಗ!

23/06/2025 10:14 AM1 Min Read

BREAKING : ಸಾಬ್ರ ಹೆಸರಿಗೆ ಜಮೀನು ಪರಭಾರೆ ಮಾಡಿದ್ರೆ ನೇಣು ಹಾಕ್ತಿನಿ : ಅಧಿಕಾರಿಗಳಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಶಾಸಕ!

23/06/2025 10:02 AM1 Min Read

BREAKING : ಮಂಡ್ಯದಲ್ಲಿ ಘೋರ ದುರಂತ : ತಲೆ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಸಾವು!

23/06/2025 9:51 AM1 Min Read
Recent News

SHOCKING : ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯರ ಮೇಲೆ ಹರಿದ ಬಸ್ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

23/06/2025 10:17 AM

‘ಭಾರತೀಯ ರಿಯಲ್ ಎಸ್ಟೇಟ್ನಲ್ಲಿ 90% ಖರೀದಿದಾರರು ಹಣವನ್ನು ಕಳೆದುಕೊಳ್ಳುತ್ತಾರೆ’: ವರದಿ

23/06/2025 10:15 AM

BIG NEWS : ಛೆ..ಇದೆಂತಾ ವಿಕೃತಿ : ಮಂಡ್ಯದಲ್ಲಿ ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲೆ ಬಿಟ್ಟು ಹೋದ ಪಾಪಿ ಮಗ!

23/06/2025 10:14 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’700 ಅಂಕ ಕುಸಿತ 25,000 ಕ್ಕಿಂತ ಕೆಳಗಿಳಿದ ನಿಫ್ಟಿ |Share Market

23/06/2025 10:12 AM
State News
KARNATAKA

BIG NEWS : ಛೆ..ಇದೆಂತಾ ವಿಕೃತಿ : ಮಂಡ್ಯದಲ್ಲಿ ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲೆ ಬಿಟ್ಟು ಹೋದ ಪಾಪಿ ಮಗ!

By kannadanewsnow0523/06/2025 10:14 AM KARNATAKA 1 Min Read

ಮಂಡ್ಯ : ನಿನ್ನೆ ತಾನೆ ಚಿತ್ರದುರ್ಗದಲ್ಲಿ 82 ವರ್ಷದ ವೃದ್ಧನನ್ನು ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸ್ವಂತ ಮಕ್ಕಳೇ ಮನೆಯಿಂದ ಹೊರಹಾಕಿರುವ…

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

23/06/2025 10:04 AM

BREAKING : ಸಾಬ್ರ ಹೆಸರಿಗೆ ಜಮೀನು ಪರಭಾರೆ ಮಾಡಿದ್ರೆ ನೇಣು ಹಾಕ್ತಿನಿ : ಅಧಿಕಾರಿಗಳಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಶಾಸಕ!

23/06/2025 10:02 AM

BREAKING : ಮಂಡ್ಯದಲ್ಲಿ ಘೋರ ದುರಂತ : ತಲೆ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಸಾವು!

23/06/2025 9:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.