ಬೆಂಗಳೂರು : ಪ್ರೀತಿಸಿದ ಯುವತಿಯಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ನಡೆದಿದೆ. ಮಾತ್ರೆ ಸೇವಿಸಿ ಕುಂಬಳಗೋಡು ಮೂಲದ ಮಂಜುನಾಥ್ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಜೂನ್ 13 ರಂದು ಮಂಜುನಾಥ್ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆಯ ಬಳಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇದೀಗ ಯುವಕನ ಆತ್ಮಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೀತಿಸಿದ ಯುವತಿ ನಂಬಿಸಿ ನನಗೆ ಮೋಸ ಮಾಡಿದ್ದಾಳೆ ಹಾಗಾಗಿ ಬೇರೊಬ್ಬನ ಜೊತೆಗೆ ಸಂಬಂಧ ಇದೆ ಎಂದು ಯುವಕ ಆರೋಪಿಸಿದ್ದಾನೆ.
ಮಾತ್ರೆ ಸೇವಿಸಿದ ಮಂಜುನಾಥನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಇದೀಗ ಚಿಕಿತ್ಸೆ ಫಲಕಾರಿ ಆಗದೆ ಯುವಕ ಮಂಜುನಾಥ್ ಸಾವನಪ್ಪಿದ್ದಾನೆ. ಮೊಬೈಲ್ ಪಾಸ್ವರ್ಡ್ ಸಮೇತ ಯುವಕ ಸೆಲ್ಫಿ ವಿಡಿಯೋ ಮಾಡಿದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆಯ ಕುಟುಂಬಸ್ಥರು ಇದೀಗ ನಾಪತ್ತೆಯಾಗಿದ್ದಾರೆ.ಕೇಸ್ ದಾಖಲಿಸಿ ದೊಡ್ಡಬಳ್ಳಾಪುರ ಗ್ರಾಮಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.