ಬೆಂಗಳೂರು : ನಮ್ಮ ಸರ್ಕಾರದಲ್ಲಿ ಆರ್ಥಿ ತೊಂದರೆ ಇಲ್ಲ. ಮನಸ್ಸಿಗೆ ಬೇಸರಗೊಂಡು ಶಾಸಕ ರಾಜುಕಾಗೆ ಮಾತನಾಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಹಣಕಾಸಿನ ಸಮಸ್ಯೆ ಇಲ್ಲ. ಮನಸ್ಸಿಗೆ ಬೇಸರಗೊಂಡು ಶಾಸಕ ರಾಜುಕಾಗೆ ಮಾತನಾಡಿದ್ದಾರೆ. ಕೆಲವೊಮ್ಮೆ ಕ್ಷೇತ್ರಗಳಲ್ಲಿ ಅನುದಾನ ಬಿಡುಗಡೆ ಆಗುವುದು ವಿಳಂಬವಾಗುತ್ತದೆ. ಎಸ್ಟಿಮೇಟ್ ಬಳಿಕ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಆಗಲಿದೆ ಎಂದರು.
ಕಾಂಗ್ರೆಸ್ ಶಾಸಕರಾದಂತಹ ರಾಜು ಕಾಗೆ ರಾಜ್ಯದ ಇಂತಹ ಆಡಳಿತ ವ್ಯವಸ್ತೆಯಿಂದ ನನಗೆ ತುಂಬಾ ನೋವಾಗಿದೆ. ಎರಡು ದಿನದಲ್ಲಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯವಿಲ್ಲ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯ ಬಗ್ಗೆ ಅಸಮಧಾನ ಹೊರ ಹಾಕಿದ ಅವರು, ರಾಜಿನಾಮೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸ್ವಪಕ್ಷದ ಶಾಸಕರಿಂದಲೇ ಇದೀಗ ಅಸಮಾಧಾನ ಹೊರ ಬೀಳುತ್ತಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ ಎಂದು ಬೆಳಗಾವಿಯಲ್ಲಿ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.