ಬೆಂಗಳೂರು : ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆಯರಿಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ಕಾರು ಡಿಕ್ಕಿಯಾಗಿ ತಿಮ್ಮಕ್ಕ (60) ಹಾಗು ಯಶೋದ (33) ಇದೀಗ ಸಾವನ್ನಪ್ಪಿದ್ದಾರೆ.
ತಿಮ್ಮಕ್ಕ ಮತ್ತು ಯಶೋದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದಂತಹ ಇಟಿಯೋಸ್ ಕಾರು ಇಬ್ಬರಿಗೆ ಗುದ್ದಿದೆ.ಮಹಿಳೆಯರಿಗೆ ಡಿಕ್ಕಿ ಹೊಡೆದು ಕಾರು ಪಕ್ಕದಲ್ಲಿಧ ಮನೆಯ ಕಾಂಪೌಂಡ್ ಗುದ್ದಿದೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.