ಕೋಲಾರ : ರಾಜ್ಯದಲ್ಲಿ ಮಾವು ಬೆಳೆ ಹೆಚ್ಚಾಗಿದ್ದು ಆದರೆ ಅದಕ್ಕೆ ತಕ್ಕಂತೆ ಬೆಲೆ ಇಲ್ಲ ಹಾಗಾಗಿ ರಾಜ್ಯದ ಜನರು ಮಾವು ಬೆಳೆಗೆ ಬೆಂಬಲ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 22 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.ಇದೀಗ ಇದು ಕೋಲಾರದಲ್ಲಿ ನಾವು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ ಮೇಲೆ ಮಾವಿನ ಹಣ್ಣುಗಳನ್ನು ಸುರಿದು ಪ್ರತಿಭಟನೆ ನಡೆಸಿದರು.
ಕೋಲಾರದಲ್ಲಿ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿಗೆ ಮಾವು ಸುರಿದು ಮಾವು ಬೆಳೆಗಾರರು ಆಕ್ರೋಶ ಹೊರ ಹಾಕಿದ್ದಾರೆ. ಚೆನ್ನೈ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಬಂದ್ ಮಾಡಿದ್ದಾರೆ ಕೋಲಾರದ ಕೊಂಡ ರಾಜನಹಳ್ಳಿ ಬಳಿ ಹೆದ್ದಾರಿ ಮೇಲೆ ಮಾವಿನ ಕಾಯಿ ಸುರಿದು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಇಂದು ಸಂಜೆಯೊಳಗೆ ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸದೆ ಹೋದರೆ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸುತ್ತೇವೆ. ಅಲ್ಲದೇ ಗುರುವಾರ ಕೋಲಾರ ಬಂದ್ ಮಾಡ್ತೇವೆ ಎಂದು ಇದೆ ಸಂದರ್ಭದಲ್ಲಿ ಪ್ರತಿಭಟನಾ ನಿರತ ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ.