ನವದೆಹಲಿ: ಮಾವುಗಳ ದರ ಇಳಿಕೆಯ ಕಾರಣದಿಂದ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದರು. ಈ ಮಾವು ಬೆಳೆಗಾರರ ಬೆಂಬಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಿಂತಿದ್ದಾರೆ. ಈ ಸಂಬಂಧ ಕೇಂದ್ರ ಕೃಷಿ ಸಚಿವರಿಗೆ ಅವರು ಪತ್ರ ಬರೆದು, ರೈತರ ಸಮಸ್ಯೆಗೆ ಪರಿಹರಿಸುವಂತೆ ಮನವಿ ಮಾಡಿದ್ದಾರೆ.
ಹೌದು ಮಾವು ಬೆಳೆಗಾರರ ಸಮಸ್ಯೆಯ ಸಂಬಂಧ ಹೆಚ್.ಡಿ ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿನ ವಾತಾವರಣ, ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಮಾವು ಬೆಳೆಗಾರರ ಸಮಸ್ಯೆ ಪರಿಹರಿಸಲು ಪತ್ರ ಬರೆದು ಸಮಸ್ಯೆಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮುಂತಾದ ಜಿಲ್ಲೆಗಳಲ್ಲಿ ಮಾವು ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಭಾರೀ ಬೆಲೆ ಕುಸಿತದಿಂದ ಬೆಳಗಾರರು ಕಂಗಾಲಾಗಿದ್ದಾರೆ. ಕೂಡಲೇ ಅವರ ಸಂಕಷ್ಟಕ್ಕೆ ನೆರವಾಗಬೇಕು. ಮಾವು ಬೆಳೆಗಾರರಿಗೆ ಪರಿಹಾರ ನೀಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ