Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026ರ ಚುನಾವಣೆಗೆ ಮುನ್ನ ಮೇಲ್-ಇನ್ ಮತಪತ್ರಗಳು, ಮತದಾನ ಯಂತ್ರ ತೆಗೆದುಹಾಕುವ ಆದೇಶಕ್ಕೆ ಸಹಿ : ಅಮೆರಿಕಾ ಅಧ್ಯಕ್ಷ ಟ್ರಂಪ್

18/08/2025 6:01 PM

BREAKING: ‘ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಆಲಿ’ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

18/08/2025 6:00 PM

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

18/08/2025 5:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `GDP’ಯಲ್ಲಿ ದೇಶದಲ್ಲೇ ಕರ್ನಾಟಕ 3ನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ
KARNATAKA

BIG NEWS : `GDP’ಯಲ್ಲಿ ದೇಶದಲ್ಲೇ ಕರ್ನಾಟಕ 3ನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

By kannadanewsnow5725/06/2025 6:29 AM

ನವದೆಹಲಿ : ದೇಶಕ್ಕೆ ಜಿಎಸ್ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಸಿಎಂ ಸಿದ್ದರಾಮಯ್ಯ,ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಗಳ ಬಗ್ಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14ನೇ ಹಣಕಾಸು ಆಯೋಗದಲ್ಲಿ 4.7% ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು ₹80,000 ಕೋಟಿ ನಷ್ಟವಾಗಿದೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಅನ್ಯಾಯವಾಗಿದೆ. ರಾಜ್ಯಕ್ಕೆ ವಿಶೇಷ ಅನುದಾನ ₹5,495 ಕೋಟಿ ಮೀಸಲಿಡಿಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್ ಗೆ ₹3,000 ಕೋಟಿ, ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ ₹3,000 ಕೋಟಿ ಸೇರಿದಂತೆ ಒಟ್ಟು ₹11,495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ ₹80,000 ಕೋಟಿ ನಮಗೆ ಕಡಿಮೆಯಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದೆ ಎಂದರು.

ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ. ಕರ್ನಾಟಕ 8.7% ಜಿಡಿಪಿಗೆ ಕೊಡುಗೆ ನೀಡುತ್ತಿದೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ ಎಂದು ತಿಳಿಸಿದ್ದಾರೆ.

ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20 ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ.

ಬೆಂಗಳೂರು ಜಾಗತಿಕ ನಗರವಾಗಿದ್ದು, ನಗರದ ಬಂಡವಾಳ ಕಾರ್ಯಗಳಿಗೆ ₹1.15 ಲಕ್ಷ ಕೋಟಿ ಬೇಕಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ಮಲೆನಾಡು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.
ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತಸಚಿವರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

BIG NEWS: Karnataka ranks 3rd in the country in GDP: CM Siddaramaiah
Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

18/08/2025 5:50 PM2 Mins Read

ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

18/08/2025 5:35 PM1 Min Read

ಜಂಗಲ್ ಖರಾಬು-ಬಿ ಖರಾಬು ಜಮೀನಿನ ಮಂಜೂರಾತಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ

18/08/2025 5:33 PM1 Min Read
Recent News

2026ರ ಚುನಾವಣೆಗೆ ಮುನ್ನ ಮೇಲ್-ಇನ್ ಮತಪತ್ರಗಳು, ಮತದಾನ ಯಂತ್ರ ತೆಗೆದುಹಾಕುವ ಆದೇಶಕ್ಕೆ ಸಹಿ : ಅಮೆರಿಕಾ ಅಧ್ಯಕ್ಷ ಟ್ರಂಪ್

18/08/2025 6:01 PM

BREAKING: ‘ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಆಲಿ’ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

18/08/2025 6:00 PM

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

18/08/2025 5:50 PM

BREAKING : ಪ್ರಧಾನಿ ಮೋದಿಗೆ ಪುಟಿನ್ ಕರೆ, ಅಲಾಸ್ಕಾದಲ್ಲಿ ಟ್ರಂಪ್ ಸಭೆ ಕುರಿತು ಮಾಹಿತಿ ಹಂಚಿಕೊಂಡ ರಷ್ಯಾ ಅಧ್ಯಕ್ಷ

18/08/2025 5:49 PM
State News
KARNATAKA

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

By kannadanewsnow0918/08/2025 5:50 PM KARNATAKA 2 Mins Read

ಬೆಂಗಳೂರು : “ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ…

ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

18/08/2025 5:35 PM

ಜಂಗಲ್ ಖರಾಬು-ಬಿ ಖರಾಬು ಜಮೀನಿನ ಮಂಜೂರಾತಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ

18/08/2025 5:33 PM

ಎಲೆಕ್ಟ್ರಿಕಲ್ ಮೋಟರ್ ರಿವೈಂಡಿಂಗ್ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

18/08/2025 5:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.