ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದ ತ್ಯಾಗರ್ತಿಯಲ್ಲಿ ಆರ್ಯ ಈಡಿಗ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿಯಾಗಿ ಮನವಿ ಮಾಡಿದರು.
ಇಂದು ಬೆಂಗಳೂರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿಯಾದರು. ಈ ವೇಳೆಯಲ್ಲಿ ಸಾಗರ ತಾಲ್ಲೂಕಿನ ತ್ಯಾಗರ್ತಿಯ ಆರ್ಯ ಈಡಿಗ ಸಮುದಾಯ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಿಕೊಡುವಂತೆ ಮನವಿಯನ್ನು ಸಲ್ಲಿಸಲಾಯಿತು.
ಶಾಸಕರ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿರುವಂತ ಸಚಿವ ಶಿವರಾಜ್ ತಂಗಡಗಿ ಅವರು, ಶೀಘ್ರವೇ ತ್ಯಾಗರ್ತಿಯ ಆರ್ಯ ಈಡಿಗ ಸಮುದಾಯ ಭವನ ನಿರ್ಮಾಣಕ್ಕೆ ಬೇಕಿರುವಂತ ಅನುದಾವನ್ನು ಒದಗಿಸಿ ಕೊಡುವಂತ ಭರವಸೆಯನ್ನು ನೀಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯ ಸೋಮಶೇಖರ ಲಾವಿಗೆರೆ, ಚೇತನ್ ರಾಜ್ ಕಣ್ಣೂರು ಉಪಸ್ಥಿತರಿದ್ದರು.
ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!